- Advertisement -
- Advertisement -
ಬೆಂಗಳೂರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದೆ.ಉಡುಪಿ ಜಿಲ್ಲೆ ಶೇ. 94 ಫಲಿತಾಂಶದೊಂದಿಗೆ ರಾಜ್ಯದಲ್ಲಿ ಮೊದಲ ಸ್ಥಾನ ಪಡೆದಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಶೇ. 92.13 ಫಲಿತಾಂಶದೊಂದಿಗೆ ಎರಡನೇ ಸ್ಥಾನ ಪಡೆದಿದೆ.
ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನದಲ್ಲಿದ್ದರೆ, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.ಈ ಬಾರಿ ಒಟ್ಟಾರೆ 76.91% ನಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 6,31,204 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ.
ಫಲಿತಾಂಶದಲ್ಲಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದು, ಗ್ರಾಮೀಣ ವಿದ್ಯಾರ್ಥಿಗಳೇ ಹೆಚ್ಚು ಉತ್ತೀರ್ಣರಾಗಿದ್ದಾರೆ.ಬಾಗಲಕೋಟೆ ಜಿಲ್ಲೆಯ ಅಂಕಿತಾ 625 ಕ್ಕೆ 625 ಅಂಕ ಪಡೆದಿದ್ದು, ಎಂಟು ವಿದ್ಯಾರ್ಥಿಗಳು 624 ಅಂಕ ಗಳಿಸಿದ್ದಾರೆ.
ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಬಾಗಲಕೋಟೆಯ ಅಂಕಿತಾ ಬಸಪ್ಪ
- Advertisement -