- Advertisement -
- Advertisement -
ಮಂಗಳೂರು: ವಿದ್ಯುತ್ ದೀಪಾಲಂಕಾರ ತೆಗೆಯುವ ಸಂದರ್ಭದಲ್ಲಿ ಮಾತಿನ ಚಕಮಕಿ ಉಂಟಾಗಿ ಓರ್ವನ ಕೈಗೆ ಚೂರಿಯಿಂದ ಇರಿದ ಘಟನೆ ಅಡ್ಯಾರಿನಲ್ಲಿ ನಡೆದಿದೆ.
ಸುರೇಶ್ ಚೂರಿ ಇರಿತಕ್ಕೆ ಒಳಗಾದವರು. ಅಡ್ಯಾರಿನಲ್ಲಿ ಬ್ರಹ್ಮಕಲಶೋತ್ಸವಕ್ಕೆ ಹಕ್ಕಿದ್ದ ದೀಪಾಲಂಕಾರ ತೆಗೆಯುವ ಸಂದರ್ಭದಲ್ಲಿ ರೋಡಿನಲ್ಲಿ ಬಿದ್ದಿದ್ದ ಕೇಬಲನ್ನು ತೆಗೆಯುವಾಗ ಬಂದ ಪಿಕಪ್ ಚಾಲಕ ಮನೋಜ್ ಜತೆ ಮಾತಿನ ಚಕಮಕಿ ನಡೆದು ಘಟನೆ ನಡೆದಿದೆ.
ಈ ವೇಳೆ ಅಲ್ಲಿದ್ದ ಊರಿನವರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಆದರೆ ಸ್ಥಳದಿಂದ ತೆರಳಿದ ಮನೋಜ್, ಕಾರಿನಲ್ಲಿ ರತನ್ ಮತ್ತು ಹರ್ಷಿತ್ ಎಂಬವರನ್ನು ಕರೆದುಕೊಂಡು ಬಂದು ಸುರೇಶ್ನ ಎಡ ತೋಳಿಗೆ ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -