- Advertisement -
- Advertisement -
ಬೆಂಗಳೂರಿನಲ್ಲಿ RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣದಲ್ಲಿ ಮೈಸೂರಿನಿಂದ ಸಂಭ್ರಮ ಕಣ್ತುಂಬಿಕೊಳ್ಳಲು ಹೋಗಿದ್ದ ಸಿವಿಲ್ ಇಂಜಿನಿಯರ್ ಒಬ್ಬರು ಸಾವನ್ನಪ್ಪಿದ್ದಾರೆ. ಮಂಡ್ಯದ ಕೆ.ಆರ್.ಪೇಟೆಯ ರಾಯಸಮುದ್ರ ಗ್ರಾಮದ ಪೂರ್ಣಚಂದ್ರ(26) ಮೃತ ಯುವಕ.
ಪೂರ್ಣಚಂದ್ರ ಮೈಸೂರಿನ ಖಾಸಗಿ ಕಂಪನಿಯಲ್ಲಿ ಸಿವಿಲ್ ಇಂಜಿನಿಯರ್ ಕೆಲಸ ಮಾಡುತ್ತಿದ್ದರು . ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮ ಕಣ್ತುಂಬಿಕೊಳ್ಳಲು ಪೂರ್ಣಚಂದ್ರ ಬೆಂಗಳೂರಿಗೆ ತೆರಳಿದ್ದ . RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತದಲ್ಲಿ ಪೂರ್ಣಚಂದ್ರ ಸಾವನ್ನಪ್ಪಿದ್ದಾರೆ. ಸಾವಿನ ಸುದ್ದಿ ಕೇಳಿ ಪೂರ್ಣಚಂದ್ರ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
- Advertisement -