ಬೆಂಗಳೂರು: ಒಮಿಕ್ರಾನ್ ಭೀತಿ ನಡುವೆ, ಕರ್ನಾಟಕ ಸರ್ಕಾರವು ಮಂಗಳವಾರ 2022 ರ ಹೊಸ ವರ್ಷದ ಆಚರಣೆಯ ಮೇಲೆ ನಿರ್ಬಂಧಗಳನ್ನು ಪ್ರಕಟಿಸಿದೆ. ಆದಾಗ್ಯೂ, ಚರ್ಚ್ಗಳಲ್ಲಿ ಕ್ರಿಸ್ಮಸ್ ಆಚರಣೆಗಳು ಮತ್ತು ಪ್ರಾರ್ಥನಾ ಸಭೆಗಳಿಗೆ ಯಾವುದೇ ನಿರ್ಬಂಧಗಳಿಲ್ಲ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳು, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಕೋವಿಡ್ ತಜ್ಞರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ತಿಳಿಸಿದರು.
ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗುವುದು. ಹೊಸ ವರ್ಷವನ್ನು ಸ್ವಾಗತಿಸಲು ಕರ್ನಾಟಕದಾದ್ಯಂತ ನಡೆಯುವ ಎಲ್ಲಾ ಸಾರ್ವಜನಿಕ ಕೂಟಗಳನ್ನು ನಿಷೇಧಿಸಲಾಗಿದೆ. ರಾಜ್ಯದ ಯಾವುದೇ ಭಾಗದಲ್ಲಿ ಯಾವುದೇ ಸಾರ್ವಜನಿಕ ಆಚರಣೆ ಮತ್ತು ವಿಶೇಷ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಪಬ್, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್ಗಲ್ಲಿ ಅರ್ಧದಷ್ಟು ಜನರಿಗೆ ಸೇವೆ ಒದಗಿಸಬಹುದು. ಎಲ್ಲಾ ಸಿಬ್ಬಂದಿಗೆ 2 ಡೋಸ್ ಕೊರೊನಾ ಲಸಿಕೆ ಹಾಕಿಸಿರಬೇಕು. ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಆದಾಗ್ಯೂ, ಡಿಜೆ ಕಾರ್ಯಕ್ರಮಗಳು, ಹೊಸ ವರ್ಷದ ಪಾರ್ಟಿಗಳನ್ನು ಆಯೋಜಿಸಲು ಯಾವುದೇ ಅನುಮತಿ ಇರುವುದಿಲ್ಲ ಎಂದು ಸಿಎಂ ಹೇಳಿದರು.
ಹೊಸ ವರ್ಷದ ಸಂದರ್ಭದಲ್ಲಿ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ನಡೆಸದಂತೆ ಅಥವಾ ಆಯೋಜಿಸದಂತೆ ದೊಡ್ಡ ವಸತಿ ಸಂಕೀರ್ಣಗಳಿಗೆ ನಿರ್ದೇಶನಗಳನ್ನು ನೀಡಲಾಗಿದೆ. ಆಯಾ ಆರ್ಡಬ್ಲ್ಯೂಎಗಳು ಅಥವಾ ಅಪಾರ್ಟ್ಮೆಂಟ್ ಅಸೋಸಿಯೇಷನ್ಗಳಿಗೆ ನಿಯಮವನ್ನು ಅನುಸರಿಸಲು ತಿಳಿಸಲಾಗಿದೆ ಎಂದು ಹೇಳಿದರು.
ಕ್ರಿಸ್ಮಸ್ ಹಬ್ಬದಲ್ಲಿ ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ. ಕೋವಿಡ್ ಪ್ರೋಟೋಕಾಲ್ಗಳನ್ನು ಅನುಸರಿಸುವ ಮೂಲಕ ಅವರು ಇಷ್ಟು ದಿನ ಮಾಡುತ್ತಿರುವಂತೆ ಚರ್ಚ್ಗಳ ಒಳಗೆ ನಿಯಮಿತವಾಗಿ ಪ್ರಾರ್ಥನೆಗಳನ್ನು ನಡೆಸಲಾಗುವುದು ಎಂದು ಹೇಳಿದರು.