Tuesday, May 21, 2024
Homeತಾಜಾ ಸುದ್ದಿಮುಷ್ಕರ ವಾಪಾಸ್ ಪಡೆದ ರಾಜ್ಯ ಸರ್ಕಾರಿ ನೌಕರರು

ಮುಷ್ಕರ ವಾಪಾಸ್ ಪಡೆದ ರಾಜ್ಯ ಸರ್ಕಾರಿ ನೌಕರರು

spot_img
- Advertisement -
- Advertisement -

ಬೆಂಗಳೂರು;ಮಧ್ಯಂತರ ಪರಿಹಾರವಾಗಿ ಸರ್ಕಾರಿ ನೌಕರರ ಶೇ.17ರಷ್ಟು ಮೂಲ ವೇತನವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಸರ್ಕಾರಿ ನೌಕರರು ತಮ್ಮ ಮುಷ್ಕರವನ್ನು ವಾಪಾಸ್ ಪಡೆದಿದ್ದಾರೆ.

ರಾಜ್ಯ ಸರ್ಕಾರ ಎರಡು ತಿಂಗಳ ಕಾಲಾವಕಾಶವನ್ನು 7ನೇ ವೇತನ ಆಯೋಗ ಜಾರಿಗೆ ಸಂಬಂಧಿಸಿದಂತೆ ತೆಗೆದುಕೊಂಡು, ಇದೀಗ ಮಧ್ಯಂತರ ಪರಿಹಾರವಾಗಿ ಸರ್ಕಾರಿ ನೌಕರರ ಶೇ.17ರಷ್ಟು ಮೂಲ ವೇತನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಹಿನ್ನಲೆಯಲ್ಲಿ ಇಂದಿನಿಂದ ಆರಂಭಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಮುಷ್ಕರವನ್ನು ವಾಪಾಸ್ ಪಡೆದಿರೋದಾಗಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದಂತ ಅವರು, ರಾಜ್ಯ ಸರ್ಕಾರ ನಮ್ಮ ಬೇಡಿಕೆ ಈಡೋರಿಸೋ ನಿಟ್ಟಿನಲ್ಲಿ ಕ್ರಮವನ್ನು ಕೈಗೊಂಡಿದೆ. ಅಧಿಕೃತವಾಗಿ ಸರ್ಕಾರವು ನೌಕರರ ವೇತನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಹಿನ್ನಲೆಯಲ್ಲಿ ಷರತ್ತಿಗೆ ಒಳಪಟ್ಟು, ಇಂದಿನಿಂದ ಆರಂಭಗೊಂಡಿದ್ದಂತ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿಯ ಮುಷ್ಕರವನ್ನು ವಾಪಾಸ್ ಪಡೆಯುತ್ತಿರೋದಾಗಿ ಘೋಷಣೆ ಮಾಡಿದ್ದಾರೆ.

- Advertisement -
spot_img

Latest News

error: Content is protected !!