- Advertisement -
- Advertisement -
ಬೆಂಗಳೂರು: 2022-23ನೇ ಸಾಲಿನಲ್ಲಿ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಪಟ್ಟಂತೆ ಇಲಾಖಾವಾರು ಸಚಿವರಿಗೆ ಅಧಿಕಾರ ನೀಡಲಾಗಿದೆ.

ಸಾರ್ವತ್ರಿಕ ವರ್ಗಾವಣೆಗೆ ಸಂಬಂಧಪಟ್ಟಂತೆ ಮೇ ಒಂದರಿಂದ ಜೂನ್ ಹದಿನೈದರವರೆಗೆ ಸಾರ್ವತ್ರಿಕ ವರ್ಗಾವಣೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆಯಾಯ ಇಲಾಖೆಗಳ ಸಚಿವರಿಗೆ ಅಧಿಕಾರ ನೀಡಿ ಆದೇಶ ಹೊರಡಿಸಲಾಗಿದ್ದು, ಗ್ರೂಪ್ ಎ, ಬಿ, ಸಿ ಮತ್ತು ಗ್ರೂಪ್ ಡಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಅವಕಾಶ ನೀಡಲಾಗಿದೆ.
ಜೇಷ್ಠತಾ ಪಟ್ಟಿ ಪ್ರಕಾರ ಶೇಕಡಾ 6 ರಷ್ಟು ಮೀರದಂತೆ ವರ್ಗಾವಣೆಗೆ ಷರತ್ತು ಬದ್ಧ ಅವಕಾಶ ಇದೆ.
- Advertisement -