ಮಂಡ್ಯ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ನಾಗಮಂಗಲ ಪಟ್ಟಣದ ಮಂಡ್ಯ ಸರ್ಕಲ್ ನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಹಿಂದೂ ಯುವಕರು ಮತ್ತು ಪೊಲೀಸರ ಮೇಲೆ ಕಲ್ಲು ತೂರಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಹಲವು ವಾಹನಗಳನ್ನು ಜಖಂಗೊಳಿಸಲಾಗಿದ್ದು, ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಗಲಾಟೆಯಲ್ಲಿ ಮುಸ್ಲಿಂ ಯುವಕರು ತಲವಾರು ಪ್ರದರ್ಶನ ಮಾಡಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಡ್ಯ ಸರ್ಕಲ್ ನಲ್ಲಿ ಮುಸ್ಲಿಂ ಯುವಕರ ಗುಂಪು ಪೆಟ್ರೋಲ್ ಬಾಂಬ್ ಎಸೆದಿದ್ದು, ರಸ್ತೆ ಬದಿಯಲ್ಲಿದ್ದ ಅಂಗಡಿಗಳು ಧ್ವಂಸಗೊಳಿಸಲ್ಪಟ್ಟಿವೆ.
ಮೈಸೂರು ರಸ್ತೆಯಲ್ಲಿರುವ ಗುಜರಿ ಅಂಗಡಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಮೈಸೂರು ರಸ್ತೆಯಲ್ಲಿರುವ ದರ್ಗಾದ ಬಳಿ ಬಂದಾಗ ಕಲ್ಲು ತೂರಾಟ ನಡೆದಿದೆ.