Wednesday, May 1, 2024
Homeಕರಾವಳಿಕರಾವಳಿಯ ಪ್ರಬಲ ಸಮುದಾಯಕ್ಕೆ ಬಿಜೆಪಿ ಅಪಮಾನ: ಮಂಗಳೂರಿನಲ್ಲಿ ಮಾಜಿ ಸಚಿವ ರಮಾನಾಥ ರೈ ಆಕ್ರೋಶ

ಕರಾವಳಿಯ ಪ್ರಬಲ ಸಮುದಾಯಕ್ಕೆ ಬಿಜೆಪಿ ಅಪಮಾನ: ಮಂಗಳೂರಿನಲ್ಲಿ ಮಾಜಿ ಸಚಿವ ರಮಾನಾಥ ರೈ ಆಕ್ರೋಶ

spot_img
- Advertisement -
- Advertisement -

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಬಿಜೆಪಿ ಅಪಮಾನ ಮಾಡಿದ್ದು, ಕರಾವಳಿಯ ಪ್ರಬಲ ಸಮುದಾಯಕ್ಕೆ ಅಪಮಾನ ಮಾಡಲಾಗಿದೆ ಎಂದು ಮಾಜಿ ಸಚಿವ ರಮಾನಾಥ್ ರೈ ಹೇಳಿದ್ದಾರೆ.

ಮಂಗಳೂರಿನಲ್ಲಿ ಇಂದು ಮಾತನಾಡಿದ ರಮಾನಾಥ ರೈ, ಆ ಸಮುದಾಯವನ್ನು ಪ್ರತಿನಿಧಿಸುವ ಇಬ್ಬರು ಸಚಿವರುಗಳು ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ನಾರಾಯಣ ಗುರು ವಿಚಾರವನ್ನು ಪಠ್ಯ ಪುಸ್ತಕದಿಂದ ಕೈ ಬಿಟ್ಟಿರುವುದು ಅಕ್ಷಮ್ಯ ಅಪರಾಧವಾಗಿದ್ದು ಇದರಿಂದ ಹಿಂದುಳಿದ ವರ್ಗದವರಿಗೆ ಮಾತ್ರವಲ್ಲ ಸಮಸ್ತ ಮಾನವ ಸಮಾಜಕ್ಕೆ ನೋವಾಗಿದೆ‌ ಎಂದು ರಮಾನಾಥ ರೈ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಗಣರಾಜ್ಯೋತ್ಸವ ಸಂದರ್ಭದಲ್ಲಿ ಕೂಡ ನಾರಾಯಣ ಗುರುಗಳಿಗೆ ಅಪಮಾನ ಮಾಡಲಾಗಿತ್ತು, ಬಿಜೆಪಿಯವರು ಸಮಗ್ರ ಹಿಂದುಳಿದ ವರ್ಗದ ವಿರೋಧಿಗಳು‌ ಮಾಜಿ ಸಚಿವ ರಮಾನಾಥ್ ರೈ ಆಕ್ರೋಶ‌ ವ್ಯಕ್ತಪಡಿಸಿದ್ದಾರೆ.

- Advertisement -
spot_img

Latest News

error: Content is protected !!