Wednesday, June 3, 2026
Homeಉತ್ತರ ಕನ್ನಡಕಾರವಾರ: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿನಿ ಸಾವು

ಕಾರವಾರ: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿನಿ ಸಾವು

- Advertisement -
- Advertisement -

ಕಾರವಾರ: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ಸ್ಪರ್ಶಿಸಿ 2ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. 2ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಬಸವರಾಜ ಗೌಳಿ(8) ಮೃತ ದುರ್ದೈವಿ.

ಬಾಲಕಿ ಶಾಲೆಯ ಶೌಚಾಲಯದ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಸಾನ್ವಿ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾಳೆ. ಹೊಸದಾಗಿ ತೋಡಿದ ಬೋರ್‌ವೆಲ್ ಮೂಲಕ ನೀರನ್ನು ಪಂಪ್ ಮಾಡಲು ತಂತಿಯನ್ನು ಬೋರ್‌ವೆಲ್‌ಗೆ ಜೋಡಿಸಲಾಗಿತ್ತು. ಪ್ರತ್ಯೇಕವಾಗಿ ಹೆಸ್ಕಾಂನ ವಿತರಣಾ ಮಾರ್ಗದ ಸೇವಾ ಲೈನ್‌ಗೆ ಸಂಪರ್ಕ ಕಲ್ಪಿಸಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.

 ಮಕ್ಕಳು ಬಳಸುತ್ತಿದ್ದ ಶೌಚಾಲಯದೊಳಗೆ ತಂತಿ ತುಂಡಾಗಿ ಬಿದ್ದಿತ್ತು. ‘ಶೌಚಾಲಯಕ್ಕೆ ಬಂದಿದ್ದ ಸಾನ್ವಿ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

- Advertisement -

Latest News

error: Content is protected !!