ಕಾರ್ಕಳ; ರಸ್ತೆ ಬದಿ ನಡೆದುಕೊಂ
ಕಾರ್ಕಳ; ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಬಾಲಕಿ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಂದಳಿಕೆಯಲ್ಲಿ ನಡೆದಿದೆ. ಕೆದಿಂಜೆ ದಡ್ಡು ನಿವಾಸಿ ಹತ್ತನೇ ತರಗತಿ ವಿದ್ಯಾರ್ಥಿನಿ ಪ್ರಣಮ್ಯ (14) ಮೃತ ದುರ್ದೈವಿ.
ಪ್ರಣಮ್ಯ ಶನಿವಾರ ರಾತ್ರಿ ಸುಮಾರು 7 ಗಂಟೆಗೆ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಹುಣ್ಣಿಮೆ ಪೂಜೆಗೆಂದು ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬಂದ ಬೈಕ್ ಹೊಡೆದಿದೆ. ಪರಿಣಾಮವಾಗಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಪ್ರಣಮ್ಯ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಡು ಹೋಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಬಾಲಕಿ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಂದಳಿಕೆಯಲ್ಲಿ ನಡೆದಿದೆ. ಕೆದಿಂಜೆ ದಡ್ಡು ನಿವಾಸಿ ಹತ್ತನೇ ತರಗತಿ ವಿದ್ಯಾರ್ಥಿನಿ ಪ್ರಣಮ್ಯ (14) ಮೃತ ದುರ್ದೈವಿ.
ಪ್ರಣಮ್ಯ ಶನಿವಾರ ರಾತ್ರಿ ಸುಮಾರು 7 ಗಂಟೆಗೆ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಹುಣ್ಣಿಮೆ ಪೂಜೆಗೆಂದು ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬಂದ ಬೈಕ್ ಹೊಡೆದಿದೆ. ಪರಿಣಾಮವಾಗಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಪ್ರಣಮ್ಯ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.