- Advertisement -
- Advertisement -
ಬೆಳ್ತಂಗಡಿ:ರಿಕ್ಷಾ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಮಡಂತ್ಯಾರ್ ಪಾರೆಂಕಿ ರಸ್ತೆಯಲ್ಲಿ ನಡೆದಿದೆ.
ಮಡಂತ್ಯಾರ್ ಸೆಕ್ರೆಟ್ ಹಾರ್ಟ್ ಕಾಲೇಜಿನ ಪ್ರಥಮ ವರ್ಷ ಪದವಿ ವಿದ್ಯಾರ್ಥಿ ಪಾರೆಂಕಿ ವಸಂತ ನಾಯಕ್ ಎಂಬವರ ಪುತ್ರ ಶಿವಪ್ರಸಾದ್ ಎಂಬವರು ಕಾಲೇಜಿನಿಂದ ಸಂಜೆ 4.30ರ ಸುಮಾರಿಗೆ ಮನೆಗೆ ತೆರಳುತ್ತಿದ್ದಾಗ ರಿಕ್ಷಾಕ್ಕೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆಸೆಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಮಧ್ಯರಾತ್ರಿ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -