Thursday, June 4, 2026
Homeಕರಾವಳಿಉಡುಪಿಕುಂದಾಪುರ: ಬಸ್‌ನಿಂದ ಕೆಳಗೆ ಬಿದ್ದು ಚಕ್ರದಡಿ ಸಿಲುಕಿ ವಿದ್ಯಾರ್ಥಿ ದಾರುಣ ಸಾವು

ಕುಂದಾಪುರ: ಬಸ್‌ನಿಂದ ಕೆಳಗೆ ಬಿದ್ದು ಚಕ್ರದಡಿ ಸಿಲುಕಿ ವಿದ್ಯಾರ್ಥಿ ದಾರುಣ ಸಾವು

- Advertisement -
- Advertisement -

ಕುಂದಾಪುರ: ಬಸ್ ನಿಂದ ರಸ್ತೆಗೆ ಬಿದ್ದು ಚಕ್ರದಡಿ ಸಿಲುಕಿ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಹೆಮ್ಮಾಡಿಯ ಜಂಕ್ಷನ್‌ ಬಳಿ ನಡೆದಿದೆ.

ಹೆಮ್ಮಾಡಿ ಸಮೀಪದ‌ ಕಟ್ ಬೇಲ್ತೂರು ನಿವಾಸಿ, ಕೋಟೇಶ್ವರ ಕಾಗೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ (20) ಮೃತಪಟ್ಟ ವಿದ್ಯಾರ್ಥಿ. ಈತ ಬಸ್‌ ಫುಟ್‌ ಬೋರ್ಡ್‌ ಮೇಲೆ ನಿಂತು ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಕುಂದಾಪುರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!