Friday, May 3, 2024
Homeಕರಾವಳಿಸುಬ್ರಮಣ್ಯದಲ್ಲಿ ನೆರೆ ನೀರಲ್ಲೇ ಬಂದು ಪರೀಕ್ಷೆ ಬರೆದ ಪದವಿ ವಿದ್ಯಾರ್ಥಿಗಳು

ಸುಬ್ರಮಣ್ಯದಲ್ಲಿ ನೆರೆ ನೀರಲ್ಲೇ ಬಂದು ಪರೀಕ್ಷೆ ಬರೆದ ಪದವಿ ವಿದ್ಯಾರ್ಥಿಗಳು

spot_img
- Advertisement -
- Advertisement -

ಸುಬ್ರಮಣ್ಯ : ಭಾರೀ ಮಳೆಯಿಂದಾಗಿ, ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದೆ. ಆದರೆ ಮಂಗಳೂರು ವಿ.ವಿ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಅನಿವಾರ್ಯವಾಗಿ ಅಪಾಯಕಾರಿ ಸ್ಥಿತಿಯಲ್ಲಿ ಉಕ್ಕಿ ಹರಿದ ಪ್ರವಾಹ ನೀರನ್ನು ದಾಟಿ ಬಂದು  ಪದವಿ ವಿದ್ಯಾರ್ಥಿಗಳು ಪರೀಕ್ಷೆಗೆ ಬರೆದ ನಡೆದಿದೆ.

ಮಳೆ ಇದ್ದರೂ ಜಿಲ್ಲೆಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿರಲಿಲ್ಲ. ಮಾತ್ರವಲ್ಲದೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದೆ. ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿಗೆ ಪರೀಕ್ಷೆ ಹಾಜರಾಗಲು ಬರುವ ವಿದ್ಯಾರ್ಥಿಗಳು ಜಲಾವೃತಗೊಂಡ ರಸ್ತೆಯಲ್ಲೇ ಸಂಚರಿಸಿ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಬರೆದಿದ್ದಾರೆ.

- Advertisement -
spot_img

Latest News

error: Content is protected !!