- Advertisement -
- Advertisement -
ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ತರಗತಿಗೆ ಹಾಜರಾಗುವುದಾಗಿ ಪಟ್ಟು ಹಿಡಿದಿದ್ದರು ಆದರೆ ಈಗ ತಮ್ಮ ಹೇಳಿಕೆಯಿಂದ ಕೆಳಗಿಳಿದಿದ್ದಾರೆ. ಇಂದು ಕಾಲೇಜಿನ ಸಮವಸ್ತ್ರ ನಿಯಮಾವಳಿ ಪಾಲಿಸಿ ತರಗತಿಗಳಿಗೆ ಹಾಜರಾಗಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಹೈಕೋರ್ಟ್ನ ಆದೇಶಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳು ಇದೀಗ ಹಿಜಾಬ್ ತೆಗೆದು ತರಗತಿಗಳಿಗೆ ಬರಲು ಒಪ್ಪಿಗೆ ನೀಡಿದ್ದಾರೆ.
ವಿದ್ಯಾರ್ಥಿಗಳು ಬಹಿಷ್ಕಾರ ಮುಂದುವರಿಸಿದರೆ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗುತ್ತದೆ ಎಂದು ಕೆಲ ಮುಖಂಡರು ವಿದ್ಯಾರ್ಥಿಗಳೊಂದಿಗೆ ಮಾತನಾಡಿದ್ದಾರೆ. ಕಾಲೇಜು ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್ ಅತ್ರಮಜಲು ಮಾತನಾಡಿ, ದೊರೆತ ಮಾಹಿತಿಯಂತೆ ಪ್ರಸ್ತುತ ಜಾರಿಯಲ್ಲಿರುವ ನಿಯಮಗಳನ್ನು ಪಾಲಿಸಲು ಈ ವಿದ್ಯಾರ್ಥಿನಿಯರು ಒಪ್ಪಿಗೆ ಸೂಚಿಸಿದ್ದಾರೆ ಎಂದಿದ್ದಾರೆ.
- Advertisement -