- Advertisement -
- Advertisement -
ಕಡಬ: ಸುಬ್ರಹ್ಮಣ್ಯ ಗ್ರಾ.ಪಂ.ಸದಸ್ಯೆ ಐನೆಕಿದು ಗ್ರಾಮದ ಮೂಕಮಲೆ ನಿವಾಸಿ ಭಾರತಿ ನಾಪತ್ತೆಯಾಗಿ ಇಂದಿಗೆ ಐದು ದಿನಗಳಾಯ್ತು. ಆದ್ರೆ ಇನ್ನೂ ಈಕೆ ಪತ್ತೆಯಾಗಿಲ್ಲ.
ಭಾರತಿಯವರು ಅ. 29 ರಂದು ದೂರದ ಸಂಬಂಧಿಯೊಂದಿಗೆ ಕಾರಿನಲ್ಲಿ ತೆರಳಿರುವುದು ಸಿಸಿ ಕ್ಯಾಮೆರಾದಲ್ಲಿ ಕಂಡು ಬಂದಿದೆ. ಮೊಬೈಲ್ ಲೊಕೇಶನ್ ಆಧಾರದ ಮೇಲೆ ಇವರು ಬೆಂಗಳೂರಿಗೆ ತೆರಳಿರುವುದು ಗೊತ್ತಾಗಿದೆ. ಅಲ್ಲಿಂದ ಆಂಧ್ರ ಪ್ರದೇಶಕ್ಕೆ ತೆರಳಿರುವ ಬಗ್ಗೆಯೂ ಮಾಹಿತಿ ತಿಳಿದು ಬಂದಿದೆ. ಸುಬ್ರಹ್ಮಣ್ಯ ಠಾಣೆಯ ಎಸ್ ಐ ಬೆಂಗಳೂರಿನಲ್ಲಿದ್ದು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
- Advertisement -