- Advertisement -
- Advertisement -
ಸುಬ್ರಹ್ಮಣ್ಯ: ಇಲ್ಲಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ರಥೋತ್ಸವದ ಹಿನ್ನೆಲೆಯಲ್ಲಿ ಕೋವಿಡ್ 19 ಮುಂಜಾಗ್ರತಾ ಕ್ರಮವಾಗಿ ಸೇವೆಗಳಿಗೆ ಮುಂಗಡ ನೋಂದಾಯಿಸಿಕೊಂಡಿರುವ ಭಕ್ತಾದಿಗಳನ್ನು ಹೊರತುಪಡಿಸಿ ಇತರರಿಗೆ ಡಿ.17ರಿಂದ ಡಿ.20ರವರೆಗೆ ನಿರ್ಬಂಧ ಹೇರಲಾಗಿದೆ. ಈ ನಿರ್ಬಂದವು ಎಲ್ಲಾ ಅಂತರ್ ರಾಜ್ಯ ಹಾಗೂ ಅಂತರ್ ಜಿಲ್ಲಾ ಭಕ್ತರಿಗೆಅಭ್ವಯಿಸುತ್ತದೆ.
ಈ ಆದೇಶವನ್ನು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಡಿ.14ರಂದು ಹೊರಡಿಸಿದ್ದಾರೆ. ಕೋವಿಡ್ ನಿಯಮ ಪಾಲನೆ ಮಾಡುವ ನೆಲೆಯಲ್ಲಿ ಚಂಪಾಷಷ್ಠಿ ಮಹೋತ್ಸವದ ಸಂದರ್ಭ ಜನ ನಿಬಿಡತೆ ತಡೆಯಲು ಈ ಮಾರ್ಗಸೂಚಿ ಅನುಸರಿಸಲಾಗುತ್ತಿದೆ.
- Advertisement -