- Advertisement -
- Advertisement -
ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ಭಾರೀ ನೀರಿನ ಪ್ರಮಾಣ ಏರಿಕೆಯಾಗಿದ್ದು ಪರಿಣಾಮ ನದಿ ನೀರು ಹೆದ್ದಾರಿಗೆ ನುಗ್ಗಿರುವ ಘಟನೆ ನಡೆದಿದೆ.
ಸುಬ್ರಹ್ಮಣ್ಯದ ಕುಮಾರಧಾರದಲ್ಲಿ ಮಂಜೇಶ್ವರ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ದರ್ಪಣ ತೀರ್ಥ ಸೇತುವೆಯಿಂದ ಸುಮಾರು ಇನ್ನೂರು ಮೀಟರ್ ದೂರದವರೆಗೆ ಹೆದ್ದಾರಿ ಜಲಾವೃತಗೊಂಡಿದೆ.
ಕುಮಾರಪರ್ವತ ಸುಬ್ರಹ್ಮಣ್ಯ ಸುತ್ತಮುತ್ತ ಭಾರಿ ಮಳೆ ಹಿನ್ನೆಲೆ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಹಲವು ದಿನಗಳಿಂದ ಸ್ನಾನಘಟ್ಟ ಮುಳುಗಡೆಯಾಗಿದೆ. ಕುಮಾರಧಾರ ನದಿಯ ಉಪನದಿ ರಾಜ್ಯ ಹೆದ್ದಾರಿಯಲ್ಲಿರುವ ದರ್ಪಣ ತೀರ್ಥ ಸೇತುವೆ ಜಲಾವೃತಗೊಂಡಿದ್ದು, ಸಂಚಾರಕ್ಕೆ ಸಮಸ್ಯೆಯಾಗಿದೆ.
- Advertisement -