- Advertisement -
- Advertisement -
ಕುಂದಾಪುರ: ಇಲ್ಲಿನ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿ ಅರೆಬೈಲು ತೋಳಾರ್ ನಲ್ಲಿ ಕಳೆದ ಕೆಲ ದಿನಗಳಿಂದ ಮಾವಿನ ತೋಟದಲ್ಲಿ ಅಡಗಿ ಕುಳಿತಿದ್ದ ಚಿರತೆಯನ್ನು ಹಿಡಿಯುವಲ್ಲಿ ಕುಂದಾಪುರ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಕಳೆದ ಕೆಲ ತಿಂಗಳಿನಿಂದ ಮಾವಿನ ತೋಟದಲ್ಲಿ ಚಿರತೆ ಸಂಚರಿಸುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು ಆದರೆ ಇದೀಗ ಅರಣ್ಯ ಇಲಾಖೆ ಕಾರ್ಯಚರಣೆಯಲ್ಲಿ ಚಿರತೆ ಸಿಕ್ಕಿ ಹಾಕಿಕೊಂದಿದ್ದು, ಎರಡು ವರ್ಷದ ಹೆಣ್ಣು ಚಿರತೆ ಸೆರೆ ಹಿಡಿದಿರುವುದಾಗಿ ಅರಣ್ಯ ಇಲಾಖೆ ತಿಳಿಸಿದೆ.
- Advertisement -