- Advertisement -
- Advertisement -
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಉಜಿರೆ – ಧರ್ಮಸ್ಥಳ ಹೆದ್ದಾರಿಯ ನೀರಚಿಲುಮೆ ಪ್ರದೇಶದ ಗ್ರೀನ್ ಪಾರ್ಕ್ ಮುಂಭಾಗದ ರಸ್ತೆ ಬದಿಯಲ್ಲಿರುವ ಪ್ಲಾಕ್ಸ್ ಹಾಕಿರುವ ಬೋರ್ಡ್ ನ ಕಬ್ಬಿಣದ ರಾಡ್ ಗೆ ತನ್ನ ಸಾಲು ಹಾಕಿ ನೇಣುಬಿಗಿದುಕೊಂಡು ಸುಮಾರು 65 ವರ್ಷದ ಅಪರಿಚಿತ ವೃದ್ಧ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ನಂತರ ದೇಹ ಕೆಳಗೆ ಬಿದ್ದಿದ್ದು ಇಂದು ಬೆಳಗ್ಗೆ ರಸ್ತೆಯಲ್ಲಿ ಹೋಗುತ್ತಿದ್ದವರು ನೋಡಿ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದ್ದಾರೆ.
![](https://mahaxpress.com/wp-content/uploads/2022/01/IMG_20220124_110916-768x1024.jpg)
ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ವೃದ್ಧನ ಗುರುತು ಪತ್ತೆಗೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
- Advertisement -