Tuesday, July 2, 2024
Homeಕರಾವಳಿ'ಉಳ್ಳಾಲ ಪಾಕಿಸ್ತಾನದಲ್ಲಿಲ್ಲ. ಅದು ನಮ್ಮಲ್ಲೇ ಇದೆ': ಯು ಟಿ ಖಾದರ್ ಗೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್...

‘ಉಳ್ಳಾಲ ಪಾಕಿಸ್ತಾನದಲ್ಲಿಲ್ಲ. ಅದು ನಮ್ಮಲ್ಲೇ ಇದೆ’: ಯು ಟಿ ಖಾದರ್ ಗೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ತಿರುಗೇಟು

spot_img
- Advertisement -
- Advertisement -

ಮಂಗಳೂರು: ದೇಶದ ಯಾವುದೇ ಭಾಗದಲ್ಲಿ ಲವ್ ಜಿಹಾದ್, ಮತಾಂತರ, ಉಗ್ರರ ಕೃತ್ಯ ನಡೆದರೂ ನಾವು ಪ್ರಶ್ನೆ ಮಾಡಿಯೇ ಮಾಡುತ್ತೇವೆ. ಅದನ್ನ ಕೇಳಲಿಕ್ಕೆ ನೀವು ಯಾರು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಶಾಸಕ ಯು.ಟಿ. ಖಾದರ್ ಅವರಿಗೆ ಸವಾಲೆಸೆದಿದ್ದಾರೆ.

ಶನಿವಾರ ‌ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ಮನೆಯಲ್ಲಿ ನಡೆದಂತಹ ಲವ್ ಜಿಹಾದ್ ಹಾಗೂ ಉಗ್ರರ ಜೊತೆಗಿನ ಸಂಬಂಧದ ವಿಚಾರವನ್ನ ಖಂಡಿಸಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆಯನ್ನು ನಡೆಸಿತ್ತು. ಇದಿನಬ್ಬರ ಮನೆಯಲ್ಲಿ ನಡೆದಂತಹ ಮತಾಂತರದ ವಿಚಾರವನ್ನು ಕೇಳಲು ನೀವು ಯಾರು ಅಂತ ನಮಗೆ ಪ್ರಶ್ನೆ ಮಾಡಿದ್ದಾರೆ. ದೇಶದ ಯಾವುದೇ ಭಾಗದಲ್ಲಿ ಲವ್ ಜಿಹಾದ್, ಮತಾಂತರ, ಉಗ್ರ ಕೃತ್ಯ ನಡೆದರೂ ನಾವು ಪ್ರಶ್ನೆ ಮಾಡಿಯೇ ಮಾಡುತ್ತೇವೆ. ಅದನ್ನ ಕೇಳೋಕೆ ನೀವ್ಯಾರು ಎಂದು ಹೇಳಿದ್ದಾರೆ.

ಯು.ಟಿ.ಖಾದರ್ ಬಾಲಿಶ ಹೇಳಿಕೆ ನೀಡಿದ್ದಾರೆ. ಇದಿನಬ್ಬರ ಮೊಮ್ಮಗಳು ಮತ್ತು ಅವಳ ಗಂಡ ಐಸಿಸಿಗೆ ಸೇರಿರುವುದು ದಾಖಲೆ ಮೂಲಕ ಸಾಬೀತಾಗಿದೆ. ಈ ಮೂಲಕ ಇದಿನಬ್ಬರ ಕುಟುಂಬಕ್ಕೆ ಭಯೋತ್ಪಾದಕರ ನಂಟಿದೆ, ಲವ್ ಜಿಹಾದ್ ನಂಟಿದೆ ಎಂಬುದು ಸಾಬೀತಾಗಿದೆ’ ಎಂದ ಅವರು, ‘ಉಳ್ಳಾಲದಲ್ಲಿ ಹೊರಗಿನವರು ಬಂದು ಪ್ರತಿಭಟನೆ ಮಾಡಿದ್ದಾರೆ ಎಂಬ ಯು.ಟಿ. ಖಾದರ್ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಉಳ್ಳಾಲ ಪಾಕಿಸ್ತಾನದಲ್ಲಿಲ್ಲ. ಅದು ನಮ್ಮಲ್ಲೇ ಇದೆ’ ಎಂದಿದ್ದಾರೆ.

- Advertisement -
spot_img

Latest News

error: Content is protected !!