- Advertisement -
- Advertisement -
ಬೆಳ್ತಂಗಡಿ: ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಸುದರ್ಶನ್ @ ಹರ್ಷ ರಾಣೆ (36) ಅವರನ್ನು ಇಂದು ಸಂಜೆ ಉತ್ತರಕನ್ನಡ ಜಿಲ್ಲೆಯ ಶಿರಸಿಯ ಮುಂಡಗೋಡದ ಬಡ್ಡಿಗೇರಿಯಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದಾರೆ.ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ . ಈ ಸಂಬಂಧ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದರ್ಶನ್ ಗೆ ಮದುವೆಯಾಗಿ ಒಂದು ಮಗು ಕೂಡ ಇದೆ .ಮೂರು ವರ್ಷಗಳಿಂದ ಕುಟುಂಬ ಸಮೇತ ಧಾರವಾಡದಲ್ಲಿ ವಾಸವಾಗಿದ್ದರು. ಇವರಿಗೆ ಮಂಗಳೂರು , ಶಿರಸಿ ಸೇರಿದಂತೆ ಹಲವೆಡೆ ವ್ಯವಹಾರಗಳಿವೆ.
ಇನ್ನು ಸುದರ್ಶನ್ ಗೆ ಮದುವೆಯಾಗಿ ಒಂದು ಮಗು ಕೂಡ ಇದೆ . ಕುಟುಂಬ ಸಮೇತ ಧಾರವಾಡದಲ್ಲಿ ವಾಸವಾಗಿದ್ದರು. ಕೊಲೆಗೆ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇವರಿಗೆ ಮಂಗಳೂರು , ಶಿರಸಿ ಸೇರಿದಂತೆ ಹಲವೆಡೆ ವ್ಯವಹಾರಗಳಿವೆ. ಸುದರ್ಶನ್ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು.
- Advertisement -