- Advertisement -
- Advertisement -
ಮಂಗಳೂರು; ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳಾದ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ ರಾಜ್ಯ ಸರ್ಕಾರ ಮೇಜರ್ ಸರ್ಜರಿ ನಡೆಸಿತ್ತು.
ಅದರಂತೆ ಪೊಲೀಸ್ ಕಮಿಷನರ್ ಆಗಿದ್ದ ಅನುಪಮ್ ಅಗರ್ವಾಲ್ ಅವರನ್ನು ವರ್ಗಾವಣೆಗೊಳಿಸಿ ಅವರ ಜಾಗಕ್ಕೆ ನೂತನ ಕಮಿಷನರ್ ಆಗಿ ಹಿರಿಯ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಿಸಿತ್ತು. ಅದರಂತೆ ನಿರ್ಗಮಿತ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಂದ ನೂತನ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಮೇ.30 ರಂದು ಸಂಜೆ ಅಧಿಕಾರ ಸ್ವೀಕರಿಸಿಕೊಂಡರು.
- Advertisement -