Monday, May 6, 2024
Homeಕ್ರೀಡೆಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಕನ್ನಡಿಗ ಸುಹಾಸ್ ಯತಿರಾಜ್ ಗೆ ಬೆಳ್ಳಿ!

ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಕನ್ನಡಿಗ ಸುಹಾಸ್ ಯತಿರಾಜ್ ಗೆ ಬೆಳ್ಳಿ!

spot_img
- Advertisement -
- Advertisement -

ಟೋಕಿಯೊ : ಟೋಕಿಯೊ ಪ್ಯಾರಾಲಂಪಿಕ್ಸ್ 2020 ರಲ್ಲಿ ಭಾರತಕ್ಕೆ ಮತ್ತೊಂದು ಪದಕ ಸಿಕ್ಕಿದ್ದು, ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ನ ಎಸ್ಎಲ್ 4 ವಿಭಾಗದಲ್ಲಿ ಕನ್ನಡಿಗ ಸುಹಾಸ್ ಲಲಿನಕೆರೆ ಯತಿರಾಜ್ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಪುರುಷರ ಬ್ಯಾಡ್ಮಿಂಟನ್ ಎಸ್‌ಎಲ್4 ವಿಭಾಗದಲ್ಲಿ ಶನಿವಾರ ನಡೆದ ಸೆಮಿಫೈನಲ್ ಮುಖಾಮುಖಿಯಲ್ಲಿ ಯತಿರಾಜ್, ಎದುರಾಳಿ ಇಂಡೋನೇಷ್ಯಾದ ಫ್ರೆಡಿ ಸೆಟಿಯಾವನ್ ವಿರುದ್ಧ 21-9, 21-15ರ ಅಂತರದಲ್ಲಿ ಗೆಲುವು ದಾಖಲಿಸಿದ್ದರು.

ಪ್ಯಾರಾ-ಶಟ್ಲರ್ ಸುಹಾಸ್ ಯತಿರಾಜ್ ಬ್ಯಾಡ್ಮಿಂಟನ್ ಎಸ್‌ಎಲ್ 4 ವಿಭಾಗದ ಚಿನ್ನದ ಪದಕ ಪಂದ್ಯವನ್ನು 21-15, 17-21, 15-21ರಿಂದ ಸೋತ ನಂತರ 2020 ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು.

ಸುಹಾಸ್ ಎಲ್ ವೈ. 2007ರ ಬ್ಯಾಚಿನ ಉತ್ತರಪ್ರದೇಶ ಕೆಡರ್ ಐಎಎಸ್ ಅಧಿಕಾರಿಯಾಗಿದ್ದು, ಸಿಎಂ ಯೋಗಿ ಆದಿತ್ಯನಾಥ್ ರ ಮೆಚ್ಚಿನ ಅಧಿಕಾರಿ. ಕುಂಭಮೇಳವನ್ನು ಯಶಸ್ವಿಯಾಗಿ ನಿರ್ವಹಿಸಿದ ಕೀರ್ತಿಯು ಅವರಿಗೆ ಸಲ್ಲುತ್ತದೆ. ಪ್ರಸ್ತುತ ಗೌತಮ ಬುದ್ಧ ನಗರ ಡಿಸಿಯಾಗಿದ್ದಾರೆ.

ಇವರು ಶಿವಮೊಗ್ಗದ ಡಿವಿಎಸ್‌ ಕಾಲೇಜಿನ ಹಳೇಯ ವಿದ್ಯಾರ್ಥಿ. ಪದವಿಪೂರ್ವ ಶಿಕ್ಷಣದ ಬಳಿಕ ಎನ್‌ಐಟಿಕೆ ಸುರತ್ಕಲ್ ನಲ್ಲಿ ಕಂಪ್ಯೂಟರ್ ಇಂಜಿನಿಯರಿಂಗ್ ಪದವಿಯನ್ನು 2004ರಲ್ಲಿ ಪಡೆದುಕೊಂಡರು.

- Advertisement -
spot_img

Latest News

error: Content is protected !!