- Advertisement -
- Advertisement -
ಪುಂಜಾಲಕಟ್ಟೆ: ಮರದ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರು ನೇಣಿಗೆ ಶರಣಾದ ಘಟನೆ ಪುಂಜಾಲಕಟ್ಟೆಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಹರೀಶ್ ಮೂಲ್ಯ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಪುಂಜಾಲಕಟ್ಟೆ ಠಾಣಾ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಮೃತರು ಪೂಂಜಾಲಕಟ್ಟೆಯ ನೇರಳಕಟ್ಟೆಯಲ್ಲಿ ಜಿತೇಶ್ ವುಡ್ ಇಂಡಸ್ಟ್ರೀಸ್ ಎಂಬ ಸಂಸ್ಥೆಯ ಮಾಲಿಕರಾಗಿದ್ದರು. ಮೃತರು ಪತ್ನಿ ಹಾಗೂ ಎರಡು ಮಕ್ಕಳನ್ನು ಅಗಲಿದ್ದಾರೆ.
- Advertisement -