ಸುಳ್ಯ: ನದಿಯಲ್ಲಿ ಮುಳುಗಿ ಯುವಕ ನೀರುಪಾಲು
ಸುಳ್ಯ, ಮೇ.09. ನದಿಗೆ ತೆರಳಿದ್ದ ಇಬ್ಬರು ಯುವಕರ ಪೈಕಿ ಓರ್ವ ನೀರು ಪಾಲಾದ ಘಟನೆ ಸುಳ್ಯ ಸಮೀಪದ ಅಡ್ಕಾರು ದೇವಸ್ಥಾನದ ಸಮೀಪ ಶನಿವಾರ ಸಂಜೆ ನಡೆದಿದೆ. ನೀರು ಪಾಲಾದ ಯುವಕನನ್ನು ಕನಕಮಜಲು ನಿವಾಸಿ ಹರೀಶ್ ಮಳಿ ಎಂಬವರ ಪುತ್ರ ಅಶ್ವಿತ್ ಎಂದು ಗುರುತಿಸಲಾಗಿದೆ. ಅಶ್ವಿತ್ ತನ್ನ ಸ್ನೇಹಿತನೊಂದಿಗೆ ಪಯಸ್ವಿನಿ ನದಿಗೆ ತೆರಳಿ ತೆಪ್ಪದ ಮೂಲಕ ಸ್ವಲ್ಪ ದೂರ ಹೋಗಿ ದಡಕ್ಕೆ ಬಂದಿದ್ದರೆನ್ನಲಾಗಿದೆ. ಬಳಿಕ ಅಶ್ವಿತ್ ಓರ್ವನೇ ತೆಪ್ಪದಲ್ಲಿ ಹೋಗುತ್ತಿದ್ದಾಗ ಬ್ಯಾಲೆನ್ಸ್ ತಪ್ಪಿ ಮಗುಚಿ ನೀರು ಪಾಲಾದರೆಂದು ತಿಳಿದುಬಂದಿದೆ. … Continue reading ಸುಳ್ಯ: ನದಿಯಲ್ಲಿ ಮುಳುಗಿ ಯುವಕ ನೀರುಪಾಲು
Copy and paste this URL into your WordPress site to embed
Copy and paste this code into your site to embed