Saturday, April 20, 2024
Homeಕರಾವಳಿಅವಳಿ ಮಕ್ಕಳಿಗೆ ಜನ್ಮ ನೀಡಿದ್ದ ಸುಳ್ಯದ ಮಹಿಳೆ ಸಾವು: ಹುಟ್ಟುತ್ತಲೇ ಅನಾಥವಾದ ಕಂದಮ್ಮಗಳು

ಅವಳಿ ಮಕ್ಕಳಿಗೆ ಜನ್ಮ ನೀಡಿದ್ದ ಸುಳ್ಯದ ಮಹಿಳೆ ಸಾವು: ಹುಟ್ಟುತ್ತಲೇ ಅನಾಥವಾದ ಕಂದಮ್ಮಗಳು

spot_img
- Advertisement -
- Advertisement -

ಸುಳ್ಯ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಸುಳ್ಯದ ಪಂಬೆತ್ತಾಡಿ ಗ್ರಾಮದ ಬಾಣಂತಿಯೊಬ್ಬರು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಪಂಬೆತ್ತಾಡಿಯ ಮೂಲೆಮನೆ ವಿಶ್ವನಾಥ್ ಗೌಡ ಪುತ್ರಿ ಪೂಜಿತಾ ಮೃತ ಮಹಿಳೆ.

ಇವರನ್ನು ಈಶ್ವರಮಂಗಲದ ಮುಂಡ್ಯ ಕೆಮ್ಮತ್ತಡ್ಕ ಮನೋಜ್ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ಮೊನ್ನೆ ಹೆರಿಗೆಗೆಂದು ಪುತ್ತೂರಿನ ಸಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಅವರು ನಿನ್ನೆ ಬೆಳಗ್ಗೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು.ನಾರ್ಮಲ್ ಹೆರಿಗೆಯಾಗಿತ್ತು.  ಆರೋಗ್ಯವಾಗಿದ್ದ ಅವರಿಗೆ ನಿನ್ನೆ ಮಧ್ಯಾಹ್ನ ವೇಳೆಗೆ ತೀವ್ರ ರಕ್ತಸ್ರಾವ ಆಗೋದಕ್ಕೆ ಶುರುವಾಗಿದೆ. ಬಳಿಕ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಸಲಾಗಿತ್ತು.  ಸಂಜೆಯ ವೇಳೆಗೆ ಕೊಂಚ ಚೇತರಿಸಿಕೊಂಡಿದ್ದರು. ಆದ್ರೆ ನಿನ್ನೆ ತಡರಾತ್ರಿ ಮತ್ತೆ ತೀವ್ರ ರಕ್ತಸ್ರಾವವಾಗಿ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಇನ್ನು ಮಕ್ಕಳು ಆರೋಗ್ಯವಾಗಿದ್ದು  ಪುತ್ತೂರು ಆಸ್ಪತ್ರೆಯಲ್ಲಿ ಇದ್ದಾರೆ ಎನ್ನಲಾಗಿದೆ. ಪೂಜಿತಾ ತಂದೆ,ತಾಯಿ, ಪತಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಇನ್ನು ಮೊನ್ನೆಯಷ್ಟೇ ಪೂಜಿತಾ ಬಿಎಡ್ ವ್ಯಾಸಂಗ ಮುಗಿಸಿದ್ದು, ಡಿಸ್ಟಿಂಕ್ಷನ್ ನಲ್ಲಿ ಪಾಸ್ ಆಗಿದ್ದರು. ಇದೀಗ ಪೂಜಿತಾ ಅಗಲಿಕೆಯಿಂದ ಮನೆಯವರಿಗೆ ದಿಕ್ಕೇ ತೋಚದಂತಾಗಿದೆ.

- Advertisement -
spot_img

Latest News

error: Content is protected !!