Friday, June 5, 2026
Homeಕರಾವಳಿಸುಳ್ಯ: ಹೊಳೆಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಪ್ರಕರಣ; ನಾಲ್ಕು ದಿನಗಳ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಸುಳ್ಯ: ಹೊಳೆಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಪ್ರಕರಣ; ನಾಲ್ಕು ದಿನಗಳ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

- Advertisement -
- Advertisement -

ಸುಳ್ಯ: ನಾಲ್ಕು ದಿನಗಳ ಹಿಂದೆ ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಕಾಲು ಸಂಕ ದಾಟುತ್ತಿರುವ ವೇಳೆ ಕಾಲು ಸಂಕದಿಂದ ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ನಾಪತ್ತೆಯಾದ ಮೂರು ದಿವಸದಿಂದ ಕಾರ್ಯಾಚರಣೆ ಮಾಡುತ್ತಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ. ಇದೀಗ ನಾಲ್ಕನೇ ದಿವಸದ ಕಾರ್ಯಾಚರಣೆ ಬಳಿಕ ಪೆರಾಜೆಯ ನೆಡ್ಚಿಲ್ ಸಮೀಪದ ಕಣಿ ಎಂಬಲ್ಲಿ ಮೃತದೇಹ ಪತ್ತೆಯಾಗಿದೆ.

ಅಗ್ನಿಶಾಮಕ ದಳ, ಎಸ್‌ಡಿಆಎರ್‌ ಎಫ್‌ ತಂಡ, ಅಗ್ನಿಶಾಮಕ ದಳ ಸುಳ್ಯ, ಸುಳ್ಯ ಪೊಲೀಸ್ ಠಾಣಾ ಸಿಬ್ಬಂದಿ, SKSSF ಅರಂತೋಡು ಕಲ್ಲುಗುಂಡಿ ವಿಖಾಯ ತಂಡ, ಕಂದಾಯ ಇಲಾಖೆ, ಸ್ಥಳೀಯ ಗ್ರಾಮ ಪಂಚಾಯತ್ ಸಿಬ್ಬಂದಿ, ಸುಳ್ಯ-ಪೆರಾಜೆಯ ಮುಳುಗು ತಜ್ಞರಿಂದ ಕಾರ್ಯಾಚರಣೆ ನಡೆದಿತ್ತು.

- Advertisement -

Latest News

error: Content is protected !!