Thursday, May 9, 2024
Homeಕರಾವಳಿಸುಳ್ಯ ಶೂಟೌಟ್ ಪ್ರಕರಣ: ಹತ್ಯೆ ಬಳಸಿದ ಕ್ವಾಲೀಸ್ ಹಾಗೂ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

ಸುಳ್ಯ ಶೂಟೌಟ್ ಪ್ರಕರಣ: ಹತ್ಯೆ ಬಳಸಿದ ಕ್ವಾಲೀಸ್ ಹಾಗೂ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

spot_img
- Advertisement -
- Advertisement -

ಸುಳ್ಯ: ಇಲ್ಲಿನ ಶಾಂತಿನಗರದಲ್ಲಿ ಗುರುವಾರ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೃತ್ಯಕ್ಕೆ ಬಳಸಿದ್ದ ಕ್ವಾಲೀಸ್ ಹಾಗೂ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಬಿಜೆಪಿ ನಾಯಕ ಕಳಗಿ ಬಾಲಚಂದ್ರ ಅವರನ್ನು ವಾಹನ ಡಿಕ್ಕಿಯಾಗಿಸಿ ಕೊಲೆ ಮಾಡಿದ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಪತ್ ಕುಮಾರ್ ನನ್ನು ಗುರುವಾರ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಈ ಕೃತ್ಯಕ್ಕೆ ದುಷ್ಕರ್ಮಿಗಳು ಬಳಸಿದ್ದ ಕ್ವಾಲೀಸ್ ವನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇನ್ನು ಕೊಲೆಯಾದ ಸಂಪತ್ ಜೊತೆ ಇದ್ದ ಹಲವರನ್ನು, ಮನೆಯವರನ್ನು ವಿಚಾರಣೆ ಮಾಡಲಾಗಿದೆ. ಸುಳ್ಯ ಪೊಲೀಸ್ ವ್ರತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ನೇತೃತ್ವದಲ್ಲಿ ಪೊಲೀಸರು ನಾಲ್ಕು ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

- Advertisement -
spot_img

Latest News

error: Content is protected !!