- Advertisement -
- Advertisement -
ಮಂಡ್ಯ; ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜೆಡಿಎಸ್ ಪಾಲಾದ ಹಿನ್ನೆಲೆ ಸುಮಲತಾ ಅಂಬರೀಶ್ ಅವರ ನಿರ್ಧಾರ ಏನು ಅನ್ನೋದು ಎಲ್ಲರ ಕುತೂಹಲಕ್ಕೆ ಕಾರಣವಾಗಿತ್ತು. ಮಂಡ್ಯ ಇಡೀ ದೇಶದ ಗಮನ ಸೆಳೆದಿತ್ತು. ಇದೀಗ ಆ ಎಲ್ಲಾ ಕುತೂಹಲಗಳಿಗೆ ತೆರೆ ಬಿದ್ದಿದೆ. ಸುಮಲತಾ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.
ನಾನು ಮಂಡ್ಯ ಬಿಟ್ಟು ಬೇರೆಲ್ಲೂ ಹೋಗಲ್ಲ.ಈ ಬಾರಿಯೂ ಚಾನವಣೆಯು ದೊಡ್ಡ ಸವಾಲು.ಕಾಂಗ್ರೆಸ್ ಅವರು ನಮ್ಮನ್ನು ಕೈ ಬಿಟ್ಟಿದ್ದಾರೆ.ಎಲ್ಲ ಅಳೆದು ತೂಗಿ ನಿರ್ಧಾರ ಮಾಡಿದ್ದೇನೆ ನಾನು ಹೆಚ್ಡಿಕೆಗೆ ಬೆಂಬಲ ಸೂಚನೆ ಎಂದಿದ್ದಾರೆ.ಅಲ್ಲದೇ ನಾನು ಸ್ವಾರ್ಥ ರಾಜಕಾರಣ ಮಾಡಲ್ಲ. ಪಕ್ಷೇತರವಾಗಿ ಸ್ಪರ್ಧಿಸಲ್ಲ, ಕಾಂಗ್ರೆಸ್ ಸೇರಲ್ಲ ಎನ್ನುತ್ತಾ ಬೆಂಬಲಿಗರ ಸಭೆಯಲ್ಲಿ ಸುಮಲತಾ ಭಾವುಕರಾಗಿದ್ದಾರೆ.
- Advertisement -