- Advertisement -
- Advertisement -
ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಮೈತ್ರಿ ಪಕ್ಷ ಜೆಡಿಎಸ್ ಪಾಲಾಗಿರೋದರಿಂದ ಇದೀಗ ಸುಮಲತಾ ಅಂಬರೀಶ್ ಅತಂತ್ರರಾಗಿದ್ದಾರೆ. ನಾನು ರಾಜಕೀಯ ಮಾಡಿದರೆ ಅದು ಮಂಡ್ಯದಿಂದ ಮಾತ್ರ ಅನ್ನುತ್ತಿದ್ದ ಸುಮಲತಾ ಅವರು ಇದೀಗ ಏನ್ ಮಾಡ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ.ತಮ್ಮ ಮುಂದಿನ ನಡೆಯ ಬಗ್ಗೆ ಸುಮಲತಾ ಇಂದು ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಅವರು ಇಂದು ತಮ್ಮ ಕಾರ್ಯಕರ್ತರ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಇಂದು ಸಮಲತಾ ಅವರು ಮಂಡ್ಯದಲ್ಲಿ ತಮ್ಮ ಬೆಂಬಲಿಗರೊಂದಿಗೆ ಮಹತ್ವದ ಸಭೆ ನಡೆಸಲಿದ್ದು, ತಮ್ಮ ರಾಜಕೀಯ ನಡೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
- Advertisement -