- Advertisement -
- Advertisement -
ಕುಂದಾಪುರ: ಬೈಂದೂರು ತಾಲೂಕಿನಲ್ಲಿ ಕುಂದಾಪುರದಿಂದ ಭಟ್ಕಳಕ್ಕೆ ಅಕ್ರಮವಾಗಿ ಗೋಮಾಂಸ ಸಾಗಾಟ ನಡೆಸುತ್ತಿದ್ದ ಪ್ರಕರಣವು ಬೆಳಕಿಗೆ ಬಂದಿದೆ.
ಅನುಮಾನಾಸ್ಪದವಾಗಿ ಸಾಗುತ್ತಿದ್ದ ಕಾರನ್ನು ಹಿಂದೂ ಸಂಘಟನೆಯ ಸದಸ್ಯರು ಬೈಂದೂರಿನಲ್ಲಿ ತಡೆದು ತಪಾಸಣೆ ನಡೆಸಿದಾಗ ಕುಂದಾಪುರದಿಂದ ಭಟ್ಕಳಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿರುವುದು ಕಂಡುಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದ ಕಾರಿನಲ್ಲಿ ಮುಸ್ಲಿಂ ಮಹಿಳೆಯರನ್ನ ಮುಂದೆ ಕುಳ್ಳಿರಿಸಿಕೊಂಡು ಯಾರಿಗೂ ಅನುಮಾನ ಬಾರದಂತೆ ಕಾನೂನುಬಾಹಿರ ಕೃತ್ಯ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -