Sunday, June 28, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರ

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರ

- Advertisement -
- Advertisement -

ಬೆಳ್ತಂಗಡಿ: ಗ್ರಾಮೀಣ ಮಕ್ಕಳಿಗಾಗಿ ಬೆಳಾಲು  ಗ್ರಾಮ ಪಂಚಾಯಿತ್ ಅರಿವು ಕೇಂದ್ರದಲ್ಲಿ ಬೇಸಿಗೆ ಶಿಬಿರದ ಸಮರೋಪ ಸಮಾರಂಭ ಗ್ರಾ.ಪಂ. ಅರಿವು ಕೇಂದ್ರದಲ್ಲಿ ದಿ 15- 5 -2025 ರಿಂದ ಆಯೋಜಿಸಲಾದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಇವರ ಅಧ್ಯಕ್ಷತೆಯಲ್ಲಿ ದಿ. 22- 5-2025 ರಂದು ನಡೆಯಿತು.

ವೇದಿಕೆಯಲ್ಲಿ ಅಭಿವೃದ್ಧಿ ಅಧಿಕಾರಿ ಶ್ರೀ ತಾರಾನಾಥ ನಾಯ್ಕ ಕೆ ,ಬೆಳ್ತಂಗಡಿ ತಾಲೂಕು ಪಂಚಾಯಿತ್ ನರೇಗಾ ತಾಂತ್ರಿಕ ಸಹಾಯಕರಾದ ಶ್ರೀಮತಿ ರೇಷ್ಮಾ ಹಾಗೂ ತಾಲೂಕು ಶ್ರೀ ಶಕ್ತಿ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ನಿಶಾ ಬನಂದೂರು ಉಪಸ್ಥಿತರಿದ್ದರು. ಶಿಬಿರಾರ್ಥಿಗಳು ಕುಮಾರಿ ಚಾರ್ವಿಗೆ ಪ್ರಾರ್ಥಿಸಿ, ಕುಮಾರಿ ದೀಪ್ತಿ ಸ್ವಾಗತಿಸಿದರು. ಕುಮಾರಿ ದೀಕ್ಷಾ ಶಿಬಿರದ ಅನಿಸಿಕೆಯನ್ನು ಹೇಳಿದರು. ಶಿಬಿರಾರ್ಥಿಗಳಿಗೆ ಭಾಗವಹಿಸುವಿಕೆಯ ಪ್ರಮಾಣ ಪತ್ರ ಹಾಗೂ ಸ್ಮರಣಿಕೆಯನ್ನು ನೀಡಲಾಯಿತು. ಅರಿವು ಕೇಂದ್ರದ ಮೇಲ್ವಿಚಾರಕರಾದ ಡೀಕಯ್ಯ ಗೌಡ ಅರಣೆಮಾರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ವಿತ್ತರು. ಗ್ರಾಮ ಪಂಚಾಯತ್ ಸಿಬ್ಬಂದಿ ಸಹಕರಿಸಿದರು.

- Advertisement -

Latest News

error: Content is protected !!