Tuesday, May 7, 2024
Homeಅಪರಾಧಹರ್ಷ ಕೊಲೆಯನ್ನು ಸಮರ್ಥಿಸಿಕೊಂಡು ಪೋಸ್ಟ್ : ಮಂಗಳೂರು ಮುಸ್ಲಿಂ ಪೇಜ್ ವಿರುದ್ಧ ಸುಮೋಟೊ ಕೇಸ್

ಹರ್ಷ ಕೊಲೆಯನ್ನು ಸಮರ್ಥಿಸಿಕೊಂಡು ಪೋಸ್ಟ್ : ಮಂಗಳೂರು ಮುಸ್ಲಿಂ ಪೇಜ್ ವಿರುದ್ಧ ಸುಮೋಟೊ ಕೇಸ್

spot_img
- Advertisement -
- Advertisement -

ಮಂಗಳೂರು : ಭಜರಂಗದಳದ ಕಾರ್ಯಕರ್ತ ಹರ್ಷ ಸಾವಿವನ್ನು ಸಮರ್ಥಿಸಿಕೊಂಡು ಪೋಸ್ಟ್ ಮಾಡಿರುವ ಮಂಗಳೂರು ಮುಸ್ಲಿಂ ಪೇಜ್ ಬಗ್ಗೆ ಮಂಗಳೂರು ಪೊಲೀಸರು ಸುಮೋಟೊ ಕೇಸ್ ದಾಖಲಿಸಿದ್ದಾರೆ. ಕೊಲೆಯಾದ ಹರ್ಷ 2015ರಲ್ಲಿ ಪ್ರವಾದಿಯನ್ನು ನಿಂದನೆ ಮಾಡಿ ಪೋಸ್ಟ್ ಮಾಡಿದ್ದ, ಈ ಹಿನ್ನೆಲೆಯಲ್ಲಿ ಇದೀಗ ಮಂಗಳೂರು ಮುಸ್ಲಿಂ ಪೇಜ್​​ನಲ್ಲಿ ಕೊಲೆಯಾದವನು ಬೀದಿನಾಯಿ ಎಂದು ನಿಂದಿಸಲಾಗಿದೆ.

ಅಲ್ಲದೇ ಪ್ರವಾದಿಯನ್ನು ನಿಂದನೆ ಮಾಡಿದವರು ಯಾರೇ ಆದರೂ ಅವರು ಎಷ್ಟೇ ಪ್ರಭಾವಿಯಾದರೂ ಅವರ ಆಯುಷ್ಯ ವೃದ್ಧಿಯಾಗೋಲ್ಲ ಎಂದು ಪೋಸ್ಟ್​​​ನಲ್ಲಿ ಬರೆಯಲಾಗಿದೆ. ಅಲ್ಲದೇ ಕೊಲೆಯ ಸತ್ಯಾಸತ್ಯತೆ ಬಯಲಾಗಬೇಕಿದ್ದಲ್ಲಿ ಈಶ್ವರಪ್ಪನವರನ್ನು ಬಂಧಿಸಿ ಸರಿಯಾದ ತನಿಖೆ ನಡೆಸಿ ಯಾವ ಮುಸ್ಲಿಮರಿಗೆ ಸುಫಾರಿ ಕೊಟ್ಟು ಕೊಲೆ ಮಾಡಿದ್ದಾನೆಂದು ಬಾಯಿ ಬಿಡಿಸಿ ಎಂದು ಬರೆಯಲಾಗಿದೆ.

ಈ ಹಿನ್ನೆಲೆಯಲ್ಲಿ ಆಕ್ಷೇಪಾರ್ಹ ಹಾಗೂ ಬೆದರಿಕೆ ಒಡ್ಡುವ ರೀತಿಯಲ್ಲಿ ಪೋಸ್ಟ್ ಮಾಡಿರುವ ಮಂಗಳೂರು ಮುಸ್ಲಿಮ್ಸ್ ಪೇಜ್ ಮೇಲೆ ಮಂಗಳೂರು ಪೊಲೀಸರು ಸೆನ್ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಈ ಪೋಸ್ಟ್ ಅನ್ನು ಲೈಕ್, ಶೇರ್ ಹಾಗೂ ಕಮೆಂಟ್ಸ್ ಗಳನ್ನು ಮಾಡಿದರೂ ಅಪರಾಧಿಗಳಾಗಿದ್ದು, ಅವರ ಮೇಲೆಯೂ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿದ್ದಾರೆ.

- Advertisement -
spot_img

Latest News

error: Content is protected !!