Monday, June 30, 2025
Homeಕರಾವಳಿಸುಬ್ರಹ್ಮಣ್ಯ ಮನೆ ಮೇಲೆ ಗುಡ್ಡ ಕುಸಿತ ಪ್ರಕರಣ;ಮೃತ ಮಕ್ಕಳ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್...

ಸುಬ್ರಹ್ಮಣ್ಯ ಮನೆ ಮೇಲೆ ಗುಡ್ಡ ಕುಸಿತ ಪ್ರಕರಣ;ಮೃತ ಮಕ್ಕಳ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಭೇಟಿ

spot_img
- Advertisement -
- Advertisement -

ಕಡಬ: ಸುಬ್ರಹ್ಮಣ್ಯ ಮನೆ ಮೇಲೆ ಗುಡ್ಡ ಕುಸಿತದಿಂದಾಗಿ ಸಾವನ್ನಪ್ಪಿದ ಮಕ್ಕಳ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಅವರು ಭೇಟಿ ನೀಡಿದರು.

ಈ ವೇಳೆ ಕುಟುಂಬಸ್ಥರೊಂದಿಗೆ ಮಾತನಾಡಿದ  ಅವರು  ಮನೆಗಾಗಿ ಈಗಾಗಲೇ 95 ಸಾವಿರ ನೀಡಿದ್ದೇವೆ. ಇನ್ನು ಮನೆ ಕಟ್ಟುವುದಿದ್ದಲ್ಲಿ ಮತ್ತೆ  4 ಲಕ್ಷ ಕೊಡಲಾಗುವುದು.ಅಂಗಡಿಗಳಿಗೆ ನೀರು ನುಗ್ಗಿ ಹಾನಿ ಯಾಗಿದ್ದರೆ  ಹಣ ಕೊಡುವ ಪ್ರಾವಿಶನ್ ಇಲ್ಲ, ಆದರೂ  ಮುಖ್ಯ ಮಂತ್ರಿಗಳ ಗಮನಕ್ಕೆ ತಂದು ವಿಶೇಷ ಪ್ಯಾಕೇಜ್ ಘೋಷಣೆ ನೀಡಿ ಅಂಗಡಿಗಳಿಗೂ ಪರಿಹಾರ ನೀಡಲಿದ್ದೇವೆ ಎಂದು ತಿಳಿಸಿದರು.

ಸ್ಥಳದಲ್ಲಿ  ಜಿಲ್ಲಾಧಿಕಾರಿ ರಾಜೇಂದ್ರ ಕುಮಾರ್, ಎ ಸಿ ಗಿರೀಶ್ ನಂದನ್, ಜಿ.ಪಂ ಸಿ ಇ ಒ ಕುಮಾರ್ , ಬಿಜೆಪಿಯ ಜಗದೀಶ್ ಶೇಣವ, ಸುಳ್ಯ ತಹಶಿಲ್ದಾರ್ ಅನಿತಾ ಲಕ್ಷ್ಮೀ, ಕಡಬ ತಹಶೀಲ್ದಾರ್ ಅನಂತ ಶಂಕರ, ಪುತ್ತೂರು ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಎ ಸಿ ಎಫ್ ಪ್ರವೀಣ್ ಶೆಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!