- Advertisement -
- Advertisement -
ನವದೆಹಲಿ: ಸರ್ಕಾರ ತನ್ನ ಪರಿಶೀಲನೆಯನ್ನು ಪೂರ್ಣಗೊಳಿಸುವವರೆಗೆ ದೇಶದ್ರೋಹ ಕಾನೂನನ್ನು ತಡೆ ಹಿಡಿಯಲಾಗುವುದು ಎಂದು ಸುಪ್ರೀಂ ಕೋರ್ಟ್ ಇಂದು (ಬುಧವಾರ) ಮಹತ್ವದ ಆದೇಶ ನೀಡಿದೆ.
ಈಗಾಗಲೇ ದೇಶದ್ರೋಹದ ಆರೋಪ ಎದುರಿಸುತ್ತಿರುವವರು ಜಾಮೀನಿಗಾಗಿ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಮುಂದಿನ ಮರುಪರಿಶೀಲನೆ ಮುಗಿಯುವವರೆಗೆ ಕಾನೂನಿನ ಈ ನಿಬಂಧನೆಯನ್ನು ಬಳಸದಿರುವುದು ಸೂಕ್ತ ಎಂದು ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ನೇತೃತ್ವದ ಪೀಠ ಹೇಳಿದೆ.
ದೇಶದ್ರೋಹ ಆರೋಪಗಳಿಗೆ ಸಂಬಂಧಿಸಿದಂತೆ ಎಲ್ಲಾ ಬಾಕಿ ಉಳಿದಿರುವ ಪ್ರಕರಣಗಳು, ಮೇಲ್ಮನವಿಗಳು ಮತ್ತು ವಿಚಾರಣೆಗಳನ್ನು ತಡೆಹಿಡಿಯಬೇಕು” ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.
- Advertisement -