- Advertisement -
- Advertisement -
ಚಾಮರಾಜಪೇಟೆ;ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು ಈ ಕುರಿತು ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ ನೀಡಿದೆ.
ಈ ಕುರಿತು ಹೈಕೋರ್ಟ್ನಲ್ಲಿ ಮತ್ತೆ ಹೊಸದಾಗಿ ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ.ಪೂಜೆಯನ್ನು ಬೇರೆ ಕಡೆ ನಡೆಸುವಂತೆ ಮತ್ತು ಹೈಕೋರ್ಟ್ ನಲ್ಲಿ ಈ ಕುರಿತು ಮನವಿ ಸಲ್ಲಿಸಲು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಸುದೀರ್ಘ ಎರಡು ಗಂಟೆಗಳ ವಾದ ವಿವಾದವನ್ನು ಆಲಿಸಿದ ನಂತರ ತ್ರಿಸದಸ್ಯ ಪೀಠ, ಎರಡೂ ಬದಿಯ ಪಕ್ಷಕಾರಿಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದೆ.
ವಕ್ಛ್ ಬೋರ್ಡ್ ಪರ ಕಪಿಲ್ ಸಿಬಲ್ ವಾದ ಮಂಡಿಸಿದರೆ, ಕರ್ನಾಟಕದ ಪರವಾಗಿ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದರು.
- Advertisement -