Sunday, June 29, 2025
Homeಕರಾವಳಿಮಂಗಳೂರು: ಸುರತ್ಕಲ್ ಟೋಲ್ ಗೇಟ್ ಪ್ರತಿಭಟನೆ: ಹದಗೆಟ್ಟ ಆಸೀಫ್ ಅವರ ಆರೋಗ್ಯ

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ಪ್ರತಿಭಟನೆ: ಹದಗೆಟ್ಟ ಆಸೀಫ್ ಅವರ ಆರೋಗ್ಯ

spot_img
- Advertisement -
- Advertisement -

ಸುರತ್ಕಲ್ ಟೋಲ್ ಗೇಟ್ ಬಂದ್ ಮಾಡುವಂತೆ ಒತ್ತಾಯಿಸಿ ಆಸೀಫ್ ಆಪ್ತಬಾಂಧವ ನಡೆಸುತ್ತಿರುವ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಈ ಪ್ರಕ್ರಿಯೆಯಲ್ಲಿ ಅವರ ಆರೋಗ್ಯ ಹದಗೆಟ್ಟಿದೆ.

ಸ್ಥಳೀಯ ಆಡಳಿತದ ಗಮನ ಸೆಳೆಯುವ ಸಲುವಾಗಿ ಆಸಿಫ್ ತನ್ನ ದೇಹಕ್ಕೆ ಕಬ್ಬಿಣದ ಸರಪಳಿಯನ್ನು ಕಟ್ಟಿಕೊಂಡು ಫೆಬ್ರವರಿ 13 ರಂದು ಎರಡು ಗಂಟೆಗಳ ಕಾಲ ಕಂಬಕ್ಕೆ ಕಟ್ಟಿಹಾಕಿದ್ದಾರೆ. ಬಿಸಿಲಿನ ಝಳದಿಂದಾಗಿ ಅವರ ಆರೋಗ್ಯ ಹದಗೆಟ್ಟಿತ್ತು. ಸುರತ್ಕಲ್ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ಚಿಕಿತ್ಸೆ ನೀಡುವಂತೆ ಮನವಿ ಮಾಡಿದರು. ಆದರೆ, ಆಸಿಫ್ ಚಿಕಿತ್ಸೆಗೆ ಹೋಗುವುದನ್ನು ನಿರಾಕರಿಸಿದ್ದಾರೆ.

ಈ ಟೋಲ್ ಗೇಟ್ ಮುಚ್ಚುವ ಉದ್ದೇಶ ಈಡೇರುವವರೆಗೂ ನಾನು ಕದಲುವುದಿಲ್ಲ ಎಂದು ಆಸಿಫ್ ಹೇಳಿದ್ದಾರೆ. ಜಿಲ್ಲಾಧಿಕಾರಿ ನನ್ನ ಮನವಿಯನ್ನು ಸ್ವೀಕರಿಸಬೇಕು. ಸಂಬಂಧಪಟ್ಟ ಎನ್ ಎಚ್ ಎಐ ಅಧಿಕಾರಿಗಳು ಟೋಲ್ ಗೇಟ್ ಮುಚ್ಚಿರುವ ಚಿತ್ರಣ ನೀಡಬೇಕು. ಅದರ ನಂತರವೇ ನಾನು ನನ್ನ ನಿರ್ಧಾರವನ್ನು ತಿಳಿಸುತ್ತೇನೆ ಎಂದಿದ್ದಾರೆ.

- Advertisement -
spot_img

Latest News

error: Content is protected !!