- Advertisement -
- Advertisement -
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಶಾಲಾ ಕಾಲೇಜು ಆರಂಭದ ಬಗ್ಗೆ ಕಳೆದ ಕೆಲವು ತಿಂಗಳುಗಳಿಂದ ಬೇರೆ ಬೇರೆ ರೀತಿಯ ಸುದ್ದಿಗಳು ಹರಿದಾಡುತ್ತಲೇ. ಇದೀಗ ಈ ಬಗ್ಗೆ ಸ್ವತಃ ಶಿಕ್ಷಣ ಸಚಿವರೇ ಸ್ಪಷ್ಟನೆಯನ್ನು ನೀಡಿದ್ದಾರೆ.
ಹೌದು.. ಡಿಸೆಂಬರ್ ಅಂತ್ಯದವರೆಗೂ ಯಾವುದೇ ಪ್ರಾಥಮಿಕ, ಪ್ರೌಢ ಮತ್ತು ಪಿಯು ಕಾಲೇಜುಗಳು ಆರಂಭಿಸುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ ವರೆಗೆ ಶಾಲೆ ಆರಂಭ ಮಾಡದಿರುವ ಬಗ್ಗೆ ಅಭಿಪ್ರಾಯ ಕೇಳಿಬಂದಿದೆ. ಒಂದರಿಂದ 8ನೇ ತರಗತಿಗೆ ಈ ವರ್ಷ ಶಾಲೆ ಆರಂಭಿಸುವ ಯೋಚನೆಯೇ ಮಾಡಿಲ್ಲ ಎಂದು ಹೇಳಿದ್ದಾರೆ.
- Advertisement -