- Advertisement -
- Advertisement -
ಧರ್ಮಸ್ಥಳ: ಮಾಜಿ ಸಚಿವ ಮತ್ತು ರಾಜಾಜಿನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದರ್ಶನ ಪಡೆದಿದ್ದಾರೆ.
ಬೆಂಗಳೂರಿನ ರಾಜಾಜಿನಗರದ ಬಿಜೆಪಿ ಕಾರ್ಯಕರ್ತರ ತಂಡದೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ ಸುರೇಶ್ ಕುಮಾರ್ ಧರ್ಮಸ್ಥಳದಲ್ಲಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು, ಯುವ ಮೋರ್ಛಾ ಪದಾಧಿಕಾರಿಗಳು ಮತ್ತು ವಾರ್ಡ್ ಪದಾಧಿಕಾರಿಗಳು ಸುರೇಶ್ ಕುಮಾರ್ ಜೊತೆಗಿದ್ದರು.
- Advertisement -