Friday, May 3, 2024
Homeಕರಾವಳಿಮಂಗಳೂರು : ಲಂಚ ಸ್ವೀಕರಿಸುತ್ತಿದ್ದಾಗ ಲೋಕಾ ಬಲೆಗೆ ಬಿದ್ದ ಸರ್ವೆಯರ್

ಮಂಗಳೂರು : ಲಂಚ ಸ್ವೀಕರಿಸುತ್ತಿದ್ದಾಗ ಲೋಕಾ ಬಲೆಗೆ ಬಿದ್ದ ಸರ್ವೆಯರ್

spot_img
- Advertisement -
- Advertisement -

ಮಂಗಳೂರು : ಸರ್ವೆಯರ್ ಜಮೀನು ಪೋಡಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು ಮಿನಿವಿಧಾನ ಸೌಧದಲ್ಲಿರುವ ತಾಲೂಕು ಕಚೇರಿಯಲ್ಲಿರುವ ಸರ್ವೆ ಇಲಾಖೆಯ ಸರ್ವೆಯರ್ ಶೀತಲ್ ರಾಜ್ ಎಸ್.ಬಿ ಎಂಬವರು ನೀರುಮಾರ್ಗದ ನಿವಾಸಿಯ ಜಮೀನಿನ ಪೋಡಿ ಮಾಡಲು ಅರ್ಜಿದಾರರಿಂದ ಐದು ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಮಂಗಳೂರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಮಾ.7 ರಂದು ತಾಲೂಕು ಕಚೇರಿಯಲ್ಲಿ ನಾಲ್ಕು ಸಾವಿರ ಲಂಚದ ಹಣ ಸರ್ವೆಯರ್ ಶೀತಲ್ ರಾಜ್ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ.

ಲೋಕಾಯುಕ್ತ ಎಸ್ಪಿ ಸೈಮನ್ ಅವರ ನೇತೃತ್ವದ ಡಿವೈಎಸ್ಪಿ ಚೆಲುವರಾಜ್ ,ಡಾ.ಗಾನ ಪಿ ಕುಮಾರ್ ,ಇನ್ಸ್ಪೆಕ್ಟರ್ ಅಮಾನುಲ್ಲಾ ಎ, ಸುರೇಶ್ ಕುಮಾರ್ ಪಿ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

- Advertisement -
spot_img

Latest News

error: Content is protected !!