Monday, April 29, 2024
Homeಕರಾವಳಿಉಡುಪಿಉಡುಪಿ: ಲಾಕ್‌ಡೌನ್ ನಿಂದಾಗಿ ಕೆಲಸವಿಲ್ಲದೇ ಪರದಾಟ: ಮನನೊಂದ ವ್ಯಕ್ತಿ ಆತ್ಮಹತ್ಯೆಗೆ ಶರಣು

ಉಡುಪಿ: ಲಾಕ್‌ಡೌನ್ ನಿಂದಾಗಿ ಕೆಲಸವಿಲ್ಲದೇ ಪರದಾಟ: ಮನನೊಂದ ವ್ಯಕ್ತಿ ಆತ್ಮಹತ್ಯೆಗೆ ಶರಣು

spot_img
- Advertisement -
- Advertisement -

ಉಡುಪಿ : ಕೊರೋನಾ ಲಾಕ್‌ಡೌನ್ ನಿಂದಾಗಿ ಅದೆಷ್ಟೋ ಜನ ಕೆಲಸ ಕಳೆದುಕೊಂಡಿದ್ದಾರೆ. ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆಯೂ ಹೆಚ್ಚೇ ಇದೆ. ಅದೇ ರೀತಿ ಉಡುಪಿಯ ಸಿದ್ದಾಪುರದಲ್ಲೂ ವ್ಯಕ್ತಿಯೊಬ್ಬ ಲಾಕ್‌ ಡೌನ್‌  ಆರಂಭವಾದಾಗಿನಿಂದ ಕೆಲಸವಿಲ್ಲದೆ ನೊಂದು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಇಲ್ಲಿನ ಅಂಪಾರು ಗ್ರಾಮದ ಕಂಚಾರು ನಿವಾಸಿ ಸುಧಾಕರ ಶೆಟ್ಟಿ (42) ಅವರು ಮೇ 11ರಂದು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯವರೆಲ್ಲರೂ ಮೂಡುಬಗೆಯ ಕಾರ್ಯಕ್ರಮಕ್ಕೆ ತೆರಳಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಹೋದರ ಕರುಣಾಕರ ಶೆಟ್ಟಿ ನೀಡಿದ ದೂರಿನಂತೆ ಶಂಕರನಾರಾಯಣ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!