- Advertisement -
- Advertisement -
ಮಂಗಳೂರು; ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮೇ.1 ರಂದು ರಾತ್ರಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಬಜಪೆ ಕಿನ್ನಿಪದವು ನಿವಾಸಿ ಅಬ್ದುಲ್ ಸಫ್ವಾನ್( 29), ಮಂಗಳೂರು ಬಜ್ಪೆ ಶಾಂತಿಗುಡ್ಡೆ ಬಳಿಯ ನಿವಾಸಿ ನಿಯಾಜ್ (28), ಮಂಗಳೂರು ಕೆಂಜಾರು ನಿವಾಸಿ ಮೊಹಮ್ಮದ್ ಮುಝಮಿಲ್ (32), ಮಂಗಳೂರು ಕಳವಾರು ನಿವಾಸಿ ಕಲಂದರ್ ಶಾಫಿ (31), ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ರುದ್ರ ಪಾದ ನಿವಾಸಿ ರಂಜಿತ್ (19), ಚಿಕ್ಕಮಗಳೂರು ಜಿಲ್ಲೆಯ ಕಳಸ ಕೋಟೆ ಹೊಳೆ ಮಾವಿನಕೆರೆ ಗ್ರಾಮದ ನಾಗರಾಜ್ (20),ಮಂಗಳೂರು ಜೋಕಟ್ಟೆ ನಿವಾಸಿ ಮೊಹಮ್ಮದ್ ರಿಜ್ವಾನ್ (28), 2022ರಲ್ಲಿ ಕೊಲೆಯಾದ ಫಾಝಿಲ್ ಸಹೋದರ್ ಆದಿಲ್ ಮೊಹರೂಫ್ ಬಂಧಿತ ಆರೋಪಿಗಳಾಗಿದ್ದಾರೆ.
- Advertisement -