Monday, June 30, 2025
Homeತಾಜಾ ಸುದ್ದಿಕಾಂಗ್ರೆಸ್ ಕಾರ್ಯಕರ್ತನ ಅನುಮಾನಾಸ್ಪದ ಸಾವು; ತನಿಖೆಗೆ ವಿಶೇಷ ತಂಡ ರಚನೆ..!

ಕಾಂಗ್ರೆಸ್ ಕಾರ್ಯಕರ್ತನ ಅನುಮಾನಾಸ್ಪದ ಸಾವು; ತನಿಖೆಗೆ ವಿಶೇಷ ತಂಡ ರಚನೆ..!

spot_img
- Advertisement -
- Advertisement -

ಬಂಟ್ವಾಳ: ಕಾಂಗ್ರೆಸ್ ಕಾರ್ಯಕರ್ತ ಪದ್ಮನಾಭ ಸಾಮಂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಇಲಾಖೆಯು ಬಂಟ್ವಾಳ ಡಿವೈಎಸ್ ಪಿ.ಎಸ್. ವಿಜಯಪ್ರಸಾದ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿದೆ.

ಈ ತಂಡಕ್ಕೆ ಬಂಟ್ವಾಳ ಡಿವೈಎಸ್ ಪಿ.ಎಸ್. ವಿಜಯಪ್ರಸಾದ್ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.

ಘಟನೆಯ ವಿವರ: ಮನೆಯ ಗುಡ್ಡದ ಸಮೀಪದ ಮರದಲ್ಲಿ ಪದ್ಮನಾಭ ಸಾಮಂತ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ಸಾವಿನ ಕುರಿತು ಸಂಶಯ ವ್ಯಕ್ತವಾಗಿದ್ದು, ಪ್ರಕರಣದ ಬಗ್ಗೆ ತನಿಖೆ ನಡೆಸಲು ವಿಶೇಷ ಪೊಲೀಸ್ ತಂಡ ರಚಿಸುವಂತೆ ಒತ್ತಾಯ ಕೇಳಿ ಬಂದಿತ್ತು.

ಇನ್ನು ಬಂಟ್ವಾಳ ಡಿವೈಎಸ್ ಪಿ.ಎಸ್. ವಿಜಯಪ್ರಸಾದ್ ಅವರು ತಾನು ತನಿಖಾಧಿಕಾರಿಯಾಗಿ ನೇಮಕಗೊಂಡಿರುವುದಾಗಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದ‌ರ್ ಅವರಿಗೆ ಹಿಂಬರಹ ನೀಡಿ ವಿಶೇಷ ತಂಡ ರಚನೆಯ ವಿಚಾರವನ್ನು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -
spot_img

Latest News

error: Content is protected !!