Sunday, May 5, 2024
Homeಕರಾವಳಿಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮತ್ತೆ ಅವ್ಯವಸ್ಥೆ;  ತಹಶೀಲ್ದಾರ್ ಹಾಗೂ ತಂಡದಿಂದ ದಿಢೀರ್‌ ಭೇಟಿ, ಪರಿಶೀಲನೆ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮತ್ತೆ ಅವ್ಯವಸ್ಥೆ;  ತಹಶೀಲ್ದಾರ್ ಹಾಗೂ ತಂಡದಿಂದ ದಿಢೀರ್‌ ಭೇಟಿ, ಪರಿಶೀಲನೆ

spot_img
- Advertisement -
- Advertisement -

ಬೆಳ್ತಂಗಡಿ : ಇಲ್ಲಿನ ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ವ್ಯವಸ್ಥೆ ಕಲ್ಪಿಸುತ್ತಿಲ್ಲ ಎಂಬ ದೂರು ಬಂದ ಹಿನ್ನೆಲೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ಇಂದು ದಿಢೀರ್‌ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ  ಅವ್ಯವಸ್ಥೆ ನೋಡಿ ವೈದ್ಯರನ್ನು  ತರಾಟೆಗೆ ತೆಗೆದುಕೊಂಡರು.

ಆಸ್ಪತ್ರೆಯ ಡಯಾಲಿಸಿಸ್ ವಿಭಾಗದಲ್ಲಿ ಇನ್ ವಾಟರ್ ಸಮಸ್ಯೆಯಿಂದ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಬಗ್ಗೆ  ಬೆಳ್ತಂಗಡಿ ತಹಶೀಲ್ದಾರ್ ಕಚೇರಿಗೆ ದೂರು ಬಂದಿತ್ತು. ಹೀಗಾಗಿ ಇಂದು  ತಹಶೀಲ್ದಾರ್ ಪೃಥ್ವಿ ಸಾನಿಕಾಂ ಮತ್ತು ತಂಡ ದಿಢೀರ್‌ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಇನ್ ವಾಟರ್ ಸಮಸ್ಯೆ ಕಂಡು ಬಂದಿದ್ದು ನಂತರ ವೈದ್ಯಾಧಿಕಾರಿ ಚಂದ್ರಕಾಂತ್ ಮತ್ತು ಸಿಬ್ಬಂದಿಯನ್ನು ಕರೆದು ತರಾಟೆಗೆ ತೆಗೆದುಕೊಂಡರು. ಅದಲ್ಲದೆ ಏಜೆನ್ಸಿಗೆ ತಕ್ಷಣ ಪತ್ರ ಬರೆದು ಸಮಸ್ಯೆ ಬಗೆಹರಿಸಲು ಸೂಚಿಸಿದರು.

ಈ ವೇಳೆ ಕಂದಾಯ ನಿರೀಕ್ಷಕ ಪ್ರತೀಶ್ ಮತ್ತು ಚಾಲಕ ಸಂತೋಷ್ ಜೊತೆಯಲ್ಲಿದ್ದರು.

- Advertisement -
spot_img

Latest News

error: Content is protected !!