Tuesday, May 21, 2024
Homeಕರಾವಳಿದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ತಹಶೀಲ್ದಾರ್ ಗಳ ವರ್ಗಾವಣೆ

ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ತಹಶೀಲ್ದಾರ್ ಗಳ ವರ್ಗಾವಣೆ

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಮತ್ತು ಉಡುಪಿ ಜಿಲ್ಲೆಯಲ್ಲಿ ಒಬ್ಬರು ತಹಶೀಲ್ದಾರ್ ರನ್ನು ವರ್ಗಾವಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿಷ್ಟಾಚಾರ ತಹಶೀಲ್ದಾರ್ ಆಗಿದ್ದ ನಿಸರ್ಗ ಪ್ರಿಯ ಜೆ. ಅವರನ್ನು ಪುತ್ತೂರು ತಾಲೂಕು ಗ್ರೇಡ್-1 ತಹಶೀಲ್ದಾರ್ ಆಗಿ ವರ್ಗಾಯಿಸಲಾಗಿದೆ. ಪುತ್ತೂರು ತಾಲೂಕು ಗ್ರೇಡ್-1 ತಹಶೀಲ್ದಾರ್ ಆಗಿದ್ದ ಟಿ. ರಮೇಶ್ ಬಾಬು ಅವರಿಗೆ ಸರ್ಕಾರದಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಪುರಸಭಾ ತಹಶೀಲ್ದಾರ್ ಆಗಿದ್ದ ಪೃಥ್ವಿ ಸಾನಿಕಮ್ ಅವರನ್ನು ಬೆಳ್ತಂಗಡಿ ತಾಲೂಕು ಗ್ರೇಡ್-1 ತಹಶೀಲ್ದಾರ್ ಆಗಿ ನೇಮಕ ಮಾಡಲಾಗಿದೆ. ಬೆಳ್ತಂಗಡಿ ತಾಲೂಕು ಗ್ರೇಡ್-1 ತಹಶೀಲ್ದಾರ್ ಆಗಿದ್ದ ಜೆ. ಮಹೇಶ್ ಅವರಿಗೆ ಸರ್ಕಾರದದಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಬೈಂದೂರು ತಾಲೂಕು ಗ್ರೇಡ್-2 ತಹಶೀಲ್ದಾರ್ ಆಗಿದ್ದ ಶೋಭಾ ಲಕ್ಷ್ಮೀ ಹೆಚ್.ಎಸ್. ಅವರನ್ನು ಸೊರಬ ತಾಲೂಕು ಗ್ರೇಡ್-2 ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ. ಕಂದಾಯ ಇಲಾಖೆಯಲ್ಲಿ ಒಟ್ಟು 39 ಗ್ರೇಡ್-1 ಮತ್ತು ಗ್ರೇಡ್-2 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.‌

- Advertisement -
spot_img

Latest News

error: Content is protected !!