Saturday, June 6, 2026
Homeಕರಾವಳಿಮಂಗಳೂರುವಿಟ್ಲದಲ್ಲಿ ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ ಬಾಕ್ಸೈಟ್ ಅಗೆಯುವ ಸ್ಥಳಕ್ಕೆ ತಹಶೀಲ್ದಾರ್ ದಾಳಿ

ವಿಟ್ಲದಲ್ಲಿ ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ ಬಾಕ್ಸೈಟ್ ಅಗೆಯುವ ಸ್ಥಳಕ್ಕೆ ತಹಶೀಲ್ದಾರ್ ದಾಳಿ

- Advertisement -
- Advertisement -

ವಿಟ್ಲ: ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ ಬಾಕ್ಸೈಟ್ ಅಗೆಯುವ ಸ್ಥಳಕ್ಕೆ ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ನೇತೃತ್ವದಲ್ಲಿ ತಾಲೂಕು ಆಡಳಿತದ ಅಧಿಕಾರಿಗಳ ತಂಡ ಇಂದು‌ ಬೆಳ್ಳಂಬೆಳ್ಳಗೆ  ದಾಳಿ ನಡೆಸಿದೆ.

ಬಂಟ್ವಾಳ ತಾಲೂಕಿನ ಕುಡ್ತಮುಗೇರು ಹಾಗೂ ಗಡಿಪ್ರದೇಶವಾದ ಕನ್ಯಾನಪಾದೆಕಲ್ಲು ಎಂಬಲ್ಲಿಗೆ ಬೆಳಿಗ್ಗೆ 7 ಗಂಟೆ ಸುಮಾರಿಗೆ ಕಂದಾಯ ಅಧಿಕಾರಿಗಳ ತಂಡ ಹಠಾತ್ ದಾಳಿ ನಡೆಸಿ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡು ಸ್ಥಳೀಯ ಗ್ರಾ.ಪಂ.ಪಿಡಿಒ ಅವರಿಗೆ ಪ್ರಕರಣವನ್ನು ದಾಖಲಿಸಿ ಕ್ರಮಕೈಗೊಳ್ಳಲು ಹಸ್ತಾಂತರ ಮಾಡಲಾಗಿದೆ.

ಕುಡ್ತಮುಗೇರು ಎಂಬಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುವ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಿದಾಗ ಸುಮಾರು 30 ಕ್ಕೂ ಅಧಿಕ ಪಿಕಪ್ ಲೋಡ್ ಮರಳು ರಾಶಿ ಸ್ಥಳದಲ್ಲಿ ಸಂಗ್ರಹಿಸಲಾಗಿತ್ತು. ಹಾಗೂ ಮ್ಯಾನ್ ಪವರ್ ಉಪಯೋಗಿಸಿ ಮರಳು ತೆಗೆಯಲು ಉಪಯೋಗಿಸುವ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳು ಅಧಿಕಾರಿಗಳಿಗೆ ದೊರೆತಿದ್ದು, ಈ ಪ್ರಕರಣದ ಬಗ್ಗೆ ಪರಿಶೀಲಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಲು ಕೊಳ್ನಾಡು ಗ್ರಾಮಪಂಚಾಯತ್ ಪಿಡಿಒ ಅವರಿಗೆ ತಹಶಿಲ್ದಾರ್ ಅರ್ಚನಾ ಭಟ್ ಅವರು ತಿಳಿಸಿದ್ದಾರೆ.

ಬಳಿಕ ಗಡಿಭಾಗವಾದ ಕನ್ಯಾನದ ಪಾದೆಕಲ್ಲು ಎಂಬಲ್ಲಿ ಬೃಹತ್ ಮಟ್ಟದಲ್ಲಿ ಬಾಕ್ಸೈಟ್ ಅಗೆಯುತ್ತಿದ್ದು, ಅಕ್ರಮವಾಗಿ ಸಾಗಿಸಲಾಗುತ್ತದೆ ಎಂಬ ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಘಟಕದ ದಾಖಲೆ ಪತ್ರಗಳನ್ನು ಕಂದಾಯ ಇಲಾಖೆಗೆ ನೀಡುವಂತೆ ತಹಶಿಲ್ದಾರ್ ಮಾಲೀಕರಿಗೆ ತಿಳಿಸಿದ್ದು, ಈ ಪ್ರಕರಣವನ್ನು ಗಣಿಇಲಾಖೆಗೆ ಹಸ್ತಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ದಾಳಿಯ ವೇಳೆ ತಹಶಿಲ್ದಾರ್ ಅರ್ಚನಾ ಭಟ್ ಜೊತೆಗೆ ವಿಟ್ಲ ಕಂದಾಯ ಅಧಿಕಾರಿ ರವಿ ಎಂ.ಎನ್‌, ಗ್ರಾಮ ಆಡಳಿತಾಧಿಕಾರಿ ಕರಿಬಸಪ್ಪ ನಾಯಕ್, ಗ್ರಾಮ ಸಹಾಯಕಾದ ಗಿರೀಶ್ ಶೆಟ್ಟಿ, ರುಕ್ಮಯ್ಯ ಮೂಲ್ಯ, ಲಿಂಗಪ್ಪ ಗೌಡ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

- Advertisement -

Latest News

error: Content is protected !!