- Advertisement -
![]()
- Advertisement -
ಕಾರ್ಕಳ : ಇಂದಿನ ಡಿಜಿಟಲ್ ಯುಗದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕೂಡ ತನ್ನ ಡಿಜಿಟಲ್ ಸೇವೆಯನ್ನು ಒದಗಿಸಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಯುವ ಉದ್ಯಮಿ, ಕಾರ್ಕಳ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸುಹಾಸ್ ಶೆಟ್ಟಿ ಮುಟ್ಲುಪಾಡಿ ಅವರ ಮಾಲಕತ್ವದ ತಕ್ಷಶಿಲಾ ಡಿಜಿಟಲ್ ಮಾರ್ಕೆಟಿಂಗ್ ಎಂಬ ಸಂಸ್ಥೆಯನ್ನು ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಜುಲೈ13 ರಂದು ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕ್ಯಾಮ್ಕೋ ನಿರ್ದೇಶಕ ದಯಾನಂದ್ ಹೆಗ್ಡೆ , ಹೆಬ್ರಿ ಜಿಲ್ಲಾ ಪಂಚಾಯತ್ ಸದಸ್ಯೆ ಜ್ಯೋತಿ ಹರೀಶ್, ಉದ್ಯಮಿಗಳಾದ ಪ್ರಕಾಶ್ ಶೆಟ್ಟಿ ಸಮೃದ್ಧಿ , ದಿನೇಶ್ ಪೈ ಮತ್ತು ಹಿತೈಷಿಗಳು ಉಪಸ್ಥಿತರಿದ್ದರು.
ಬಂದಂತಹ ಅತಿಥಿ ಗಣ್ಯರನ್ನು ಮಾಲಕ ಸುಹಾಸ್ ಶೆಟ್ಟಿ ಮುಟ್ಲುಪಾಡಿ ಮತ್ತು ಕುಟುಂಬಸ್ಥರು ಸ್ವಾಗತಿಸಿ ಸತ್ಕರಿಸಿದರು

- Advertisement -


