ಪುತ್ತೂರು: ತಾಲ್ಲೂಕು ಮಟ್ಟದಲ್ಲಿ ನೀಡಲಾಗುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಪುತ್ತೂರಿನ 10 ಜನ ಸಾಧಕರನ್ನು ಆಯ್ಕೆಮಾಡಲಾಗಿದ್ದು, ಕಾರ್ಯಕ್ರಮದ ಮೆರವಣಿಗೆಯ ಸಂಭ್ರಮಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರು ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿದರು.
ಈ ಸಂಭ್ರದ ಹಿನ್ನಲೆಯಲ್ಲಿ 10 ಮಂದಿ ಸಾಧಕರಾದ ವೈದ್ಯಕೀಯ ಕ್ಷೇತ್ರದಲ್ಲಿ ಹಿರಿಯ ಪ್ರಸೂತಿ ತಜ್ಞ ಡಾ.ಸುಬ್ರಾಯ ಭಟ್, ಕೃಷಿ ಕ್ಷೇತ್ರದಲ್ಲಿ ಎ.ಪಿ ಸದಾಶಿವ ಮರಿಕೆ, ಸಾಹಿತ್ಯ ಕ್ಷೇತ್ರದಲ್ಲಿ ನಿರ್ಮಲಾ ಸುರತ್ಕಲ್, ಶಿಕ್ಷಣ ಕ್ಷೇತ್ರದಲ್ಲಿ ನಿವೃತ್ತ ಶಿಕ್ಷಕ ನಾರಾಯಣ ಕೆ, ಕ್ರೀಡಾ ಕ್ಷೇತ್ರದಲ್ಲಿ ದಯಾನಂದ ರೈ ಕೋರ್ಮಂಡ, ರಂಗಭೂಮಿಯಲ್ಲಿ ಸುಂದರ ರೈ ಮಂದಾರ, ಶಿಕ್ಷಣ ಸಮನ್ವಯದಲ್ಲಿ ಸುದಾನ ವಸತಿಯುತ ಶಾಲೆಯ ಸಂಚಾಲಕ ರೇ ವಿಜಯ್ ಹಾರ್ವಿನ್, ಸಮಾಜ ಸೇವೆಯಲ್ಲಿ ಸರಕಾರಿ ಆಸ್ಪತ್ರೆಯ ಡಾ.ಅಜಯ್, ಸಾಹಿತ್ಯ ಸಂಘಟನೆಯಲ್ಲಿ ನಾರಾಯಣ ಕುಂಬ್ರ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷ ಸಿದ್ಧಿಕ್ ನಿರಾಜೆ ಅವರನ್ನು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶಾಸಕರ ಮೂಲಕ ಸನ್ಮಾನಿಸಲಾಯಿತು.