Friday, June 27, 2025
Homeಉತ್ತರ ಕನ್ನಡಉತ್ತರಕನ್ನಡ; ಶಿರೂರು ಗುಡ್ಡ ಕುಸಿತ ಪ್ರಕರಣ; ತಮಿಳುನಾಡು ಮೂಲದ ಮತ್ತೋರ್ವ ಲಾರಿ ಚಾಲಕ ನಾಪತ್ತೆ

ಉತ್ತರಕನ್ನಡ; ಶಿರೂರು ಗುಡ್ಡ ಕುಸಿತ ಪ್ರಕರಣ; ತಮಿಳುನಾಡು ಮೂಲದ ಮತ್ತೋರ್ವ ಲಾರಿ ಚಾಲಕ ನಾಪತ್ತೆ

spot_img
- Advertisement -
- Advertisement -

ಉತ್ತರಕನ್ನಡ; ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಇದುವೆರಗೂ 11 ಮಂದಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿತ್ತು. ಅಲ್ಲದೇ ನಾಪತ್ತೆಯಾದವರಿಗಾಗಿ ಇನ್ನೂ ಕೂಡ ಶೋಧ ಕಾರ್ಯಾಚರಣೆ  ನಡೆಯುತ್ತಲೇ ಇದೆ. ಹೀಗಿರುವಾಗಲೇ ಇದೀಗ ತಮಿಳುನಾಡು ಮೂಲದ ಮತ್ತೋರ್ವ ಲಾರಿ ಚಾಲಕ ಘಟನೆಯಲ್ಲಿ ನಾಪತ್ತೆಯಾಗಿದ್ದಾನೆ ಎಂದು ಆತನ ಕುಟುಂಬಸ್ಥರು ದೂರು ನೀಡಿದ್ದಾರೆ. ತಮಿಳುನಾಡು ಮೂಲಕ ಲಾರಿ ಚಾಲಕ ಶರವಣ ಎಂಬುವರು ನಾಪತ್ತೆಯಾಗಿದ್ದಾರೆ ಎಂದು ಕುಟುಂಬಸ್ಥರು ಅಂಕೋಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಹೀಗಾಗಿ ಶಿರೂರು ದುರಂತದಲ್ಲಿ ನಾಪತ್ತೆಯಾದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಇನ್ನು ಈ ದುರಂತದಲ್ಲಿ ನಾಪತ್ತೆಯಾಗಿದ್ದ 8 ಜನರ ಮೃತದೇಹ ಇದುವರೆಗೆ ಪತ್ತೆಯಾಗಿದೆ. ಇನ್ನುಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇದೀಗ ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದವರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು ಶರವಣಗಾಗಿಯೂ ಹುಡುಕಾಟ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!