Friday, April 26, 2024
Homeತಾಜಾ ಸುದ್ದಿಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಹೈಸ್ಕೂಲ್ ಶಿಕ್ಷಕ

ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಹೈಸ್ಕೂಲ್ ಶಿಕ್ಷಕ

spot_img
- Advertisement -
- Advertisement -

ಬಾಗಲಕೋಟೆ: ಡೆತ್​ನೋಟ್ ಬರೆದಿಟ್ಟು ಹೈಸ್ಕೂಲ್​ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುನಗುಂದ ತಾಲೂಕಿನ ಮೂಗನೂರು ಗ್ರಾಮದಲ್ಲಿ ನಡೆದಿದೆ. ಹನುಮಂತ ಪೂಜಾರ(42) ಆತ್ಮಹತ್ಯೆಗೆ ಶರಣಾದ ಶಿಕ್ಷಕ.

ಕಮತಗಿ ಪಟ್ಟಣದ ಹೊಳೆಹುಚ್ಚೇಶ್ವರ ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಮನೆಯಲ್ಲೇ ನೇಣುಬಿಗಿದುಕೊಂಡು ಮೃತಪಟ್ಟಿರುವ ಹನುಮಂತ ಪೂಜಾರ, ಸಾವಿಗೂ ಮುನ್ನ ಡೆತ್​ನೋಟ್​ ಬರೆದಿಟ್ಟಿದ್ದಾರೆ. ಅದರಲ್ಲಿ ತನ್ನ ಸಾವಿಗೆ ಯಾರು ಕಾರಣ ಎಂದೂ ವಿವರಿಸಿದ್ದಾರೆ. ಅದರ ಡಿಟೇಲ್ಸ್​ ಇಲ್ಲಿದೆ. 

 ‘ನನ್ನ ಸಾವಿಗೆ ತಿಮ್ಮಣ್ಣ ಬಸಪ್ಪ ಹಗೆದಾಳ ಕಮತಗಿ ಕಾರಣ. ಈತ ನನಗೆ ಮೂರು ಲಕ್ಷ ಹಣ ಕೊಡಬೇಕು. ವಾಪಸ್​ ಕೇಳಿದರೆ ಕೊಟ್ಟಿಲ್ಲ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದೇನೆ’ ಎಂದು ಶಿಕ್ಷಕ ಹನುಮಂತ ಪೂಜಾರ ವಿವರಿಸಿದ್ದಾರೆ. ಜತೆಗೆ ತಿಮ್ಮಣ್ಣ ಬಸಪ್ಪ ಹಗೆದಾಳ ಕಮತಗಿಯ ಫೋನ್​ ನಂಬರ್​ ಅನ್ನೂ ಬರೆದಿದ್ದಾರೆ.

ಕಮತಗಿ ಪಟ್ಟಣದಲ್ಲಿ ಸೈಟ್ ಖರೀದಿಸಲು ಶಿಕ್ಷಕ ಹನುಮಂತ ‌ಮುಂದಾಗಿದ್ದರು. ತಿಮ್ಮಣ್ಣ ಹಗೆದಾಳ ಬಳಿ ಸೈಟ್​ ಖರೀದಿಸಲು 13 ಲಕ್ಷ ರೂಪಾಯಿಗೆ ಮಾತುಕತೆ ಆಗಿತ್ತು. ಮುಂಗಡವಾಗಿ ಹನುಮಂತ ಅವರು 3 ಲಕ್ಷ ರೂ. ಕೊಟ್ಟಿದ್ದರು. ಬಳಿಕ ಹಣ ವಾಪಸ್​ ಕೇಳಿದರೆ ತಿಮ್ಮಣ್ಣ ಕೊಟ್ಟಿರಲಿಲ್ಲವಂತೆ. ಇದೇ ವಿಚಾರವಾಗಿ ಮನನೊಂದ ಶಿಕ್ಷಕ ಸಾವಿನ ಮನೆಯ ಕದ ತಟ್ಟಿದ್ದಾರೆ. ಅಮೀನಗಢ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!